ಪ್ರಧಾನಿ ನರೇಂದ್ರಮೋದಿ 
ದೇಶ

ಮೂರು ರಾಷ್ಟ್ರಗಳ ಯಶಸ್ವಿ ಪ್ರವಾಸದ ನಂತರ ಸ್ವದೇಶಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಇಂಡೋನೇಷ್ಯಾ, ಮಲೇಷ್ಯಾ, ಸಿಂಗಾಪುರ ರಾಷ್ಟ್ರಗಳ ಮಹತ್ವದ ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ನವದೆಹಲಿಗೆ ವಾಪಾಸ್ಸಾಗಿದ್ದಾರೆ.

ನವದೆಹಲಿ: ಇಂಡೋನೇಷ್ಯಾ, ಮಲೇಷ್ಯಾ, ಸಿಂಗಾಪುರ  ರಾಷ್ಟ್ರಗಳ ಮಹತ್ವದ  ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ನವದೆಹಲಿಗೆ ವಾಪಾಸ್ಸಾಗಿದ್ದಾರೆ.

 ಮೂರು ರಾಷ್ಟ್ರಗಳಿಗೆ ಪ್ರಧಾನಿ ಭೇಟಿಯಿಂದಾಗಿ ಭಾರತದ ಪೂರ್ವ ರಾಷ್ಟ್ರಗಳ ನೀತಿಯಲ್ಲಿ ವೇಗ ಪಡೆದುಕೊಂಡಿದೆ ಎಂದು  ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟರ್ ನಲ್ಲಿ  ಹೇಳಿದ್ದಾರೆ.

ಪ್ರಧಾನಿ ಭೇಟಿ ಸಂದರ್ಭದಲ್ಲಿ ಸಿಂಗಾಪುರದ ಪ್ರಧಾನಿ ಲೀ ಸೈಯಿನ್ ಲೂಂಗ್  ಅವರೊಂದಿಗೆ ವ್ಯಾಪಕವಾದ ಮಾತುಕತೆ ನಡೆಸಿದ್ದಾರೆ. ಶಾಂಘ್ರೈ ಲಾ ಸಮ್ಮೇಳನದಲ್ಲಿ   ಏಷ್ಯಾದ ಮುಂಚೂಣಿ ರಾಷ್ಟ್ರಗಳಾದ ಭಾರತ ಹಾಗೂ ಚೀನಾದ ರಕ್ಷಣೆ  ವ್ಯವಹಾರದ ಕಾರ್ಯತಂತ್ರ ಕುರಿತಂತೆ  ಭಾಷಣ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರದಂದು  ಸಮ್ಮೇಳನದಲ್ಲಿ ಮಾತನಾಡಿದ ಅವರು, ಪೈಪೋಟಿಯ ಏಷ್ಯಾ" ಈ ಪ್ರದೇಶವನ್ನು ಮತ್ತೆ ಹಿಡಿದಿಟ್ಟುಕೊಳ್ಳಲಿದೆ . ಏಷ್ಯಾ ರಾಷ್ಟ್ರಗಳ ಸಹಕಾರ ಪ್ರಸ್ತುತದ ಶತಮಾನವನ್ನು ಬದಲಾಯಿಸಲಿದೆ ಎಂದು ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT