ಡಿಸಿಎಂ ದಿನೇಶ್ ಶರ್ಮಾ 
ದೇಶ

ಸೀತೆ ಪ್ರಣಾಳ ಶಿಶು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ವಿರುದ್ಧ ದೂರು ದಾಖಲು

ರಾಮಾಯಣದಲ್ಲಿನ ಸೀತೆ ಭಾರತದ ಮೊದಲ ಪ್ರಣಾಳ ಶಿಶು ಎಂದು ಹೇಳಿಕೆ ನೀಡುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ವಿರುದ್ಧ ಬಿಹಾರದ ಸಿತಾಮಾರ್ಹಿ ಜಿಲ್ಲೆಯಲ್ಲಿ ದೂರು ದಾಖಲಿಸಲಾಗಿದೆ.

ಪಾಟ್ನಾ: ರಾಮಾಯಣದಲ್ಲಿನ ಸೀತೆ ಭಾರತದ ಮೊದಲ ಪ್ರಣಾಳ ಶಿಶು  ಎಂದು ಹೇಳಿಕೆ ನೀಡುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ  ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ವಿರುದ್ಧ ಬಿಹಾರದ ಸಿತಾಮಾರ್ಹಿ  ಜಿಲ್ಲೆಯಲ್ಲಿ  ದೂರು ದಾಖಲಿಸಲಾಗಿದೆ.

ಈ ಸಂಬಂಧ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಕೀಲ ಚಂದನ್ ಕುಮಾರ್ ಸಿಂಗ್ ದೂರು ದಾಖಲಿಸಿದ್ದು,  ಜೂನ್  8 ರಂದು ವಿಚಾರಣೆ ನಡೆಯಲಿದೆ.

 ದಿನೇಶ್  ಶರ್ಮಾ  ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿಲ್ಲ,  ದೇಶದ ಶ್ರೀಮಂತ ಪರಂಪರೆ,  ಸಂಸ್ಕೃತಿ, ಸಂಪ್ರದಾಯವನ್ನು ಅವಮಾನಿಸಿದ್ದಾರೆ ಎಂದು    ಅರ್ಜಿದಾರರು ದೂರಿನಲ್ಲಿ ತಿಳಿಸಿದ್ದಾರೆ.

"ಶರ್ಮ ಹೇಳಿಕೆಯು ಒಂದು ನಿರ್ದಿಷ್ಟ ಧರ್ಮದ ಮನೋಭಾವವನ್ನು ನೋಯಿಸುವ ಮತ್ತು ಅವಮಾನಿಸುವ ಒಳ್ಳೆಯ ಯೋಜಿತ ರಾಜಕೀಯ ಮತ್ತು ಕ್ರಿಮಿನಲ್ ಪಿತೂರಿಯ ಭಾಗವಾಗಿದೆ. ಬಿಜೆಪಿ ನಾಯಕನ ತರ್ಕಬದ್ಧ ಪರಿಕಲ್ಪನೆಯು ಹಿಂದು ಧರ್ಮವನ್ನು ಹಾಸ್ಯಾಸ್ಪದವಾಗಿ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

 ಉತ್ತರ ಪ್ರದೇಶದ ಮಥೂರದಲ್ಲಿ ಕೌಶಾಲ್ಯಾಭಿವೃದ್ದಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಶರ್ಮಾ, ಸೀತೆ ಮಣ್ಣಿನ ಕುಡಿಕೆಯಿಂದ ಜನಿಸಿದ್ದು, ಆ ಸಂದರ್ಭದಲ್ಲಿ ಪ್ರಣಾಳ ಶಿಶು ಯೋಜನೆ ಪ್ರಗತಿಯಲ್ಲಿತ್ತು.
ಜನಕ ರಾಜ ಭೂಮಿ ಉಳುತ್ತಿದ್ದಾಗ ಸೀತೆ ಸಿಕ್ಕಿದ್ದಳು.  ಇದೇ ತಂತ್ರಜ್ಞಾನವನ್ನು ಪ್ರಣಾಳ ಶಿಶು ಎಂದು ಕರೆಯಲಾಗುತ್ತೆ ಎಂದು ಹೇಳಿಕೆ ನೀಡಿದ್ದ. ಇದು ವಿವಾದಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT