ಡಿಸಿಎಂ ದಿನೇಶ್ ಶರ್ಮಾ 
ದೇಶ

ಸೀತೆ ಪ್ರಣಾಳ ಶಿಶು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ವಿರುದ್ಧ ದೂರು ದಾಖಲು

ರಾಮಾಯಣದಲ್ಲಿನ ಸೀತೆ ಭಾರತದ ಮೊದಲ ಪ್ರಣಾಳ ಶಿಶು ಎಂದು ಹೇಳಿಕೆ ನೀಡುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ವಿರುದ್ಧ ಬಿಹಾರದ ಸಿತಾಮಾರ್ಹಿ ಜಿಲ್ಲೆಯಲ್ಲಿ ದೂರು ದಾಖಲಿಸಲಾಗಿದೆ.

ಪಾಟ್ನಾ: ರಾಮಾಯಣದಲ್ಲಿನ ಸೀತೆ ಭಾರತದ ಮೊದಲ ಪ್ರಣಾಳ ಶಿಶು  ಎಂದು ಹೇಳಿಕೆ ನೀಡುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ  ಉತ್ತರ ಪ್ರದೇಶ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ವಿರುದ್ಧ ಬಿಹಾರದ ಸಿತಾಮಾರ್ಹಿ  ಜಿಲ್ಲೆಯಲ್ಲಿ  ದೂರು ದಾಖಲಿಸಲಾಗಿದೆ.

ಈ ಸಂಬಂಧ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಕೀಲ ಚಂದನ್ ಕುಮಾರ್ ಸಿಂಗ್ ದೂರು ದಾಖಲಿಸಿದ್ದು,  ಜೂನ್  8 ರಂದು ವಿಚಾರಣೆ ನಡೆಯಲಿದೆ.

 ದಿನೇಶ್  ಶರ್ಮಾ  ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿಲ್ಲ,  ದೇಶದ ಶ್ರೀಮಂತ ಪರಂಪರೆ,  ಸಂಸ್ಕೃತಿ, ಸಂಪ್ರದಾಯವನ್ನು ಅವಮಾನಿಸಿದ್ದಾರೆ ಎಂದು    ಅರ್ಜಿದಾರರು ದೂರಿನಲ್ಲಿ ತಿಳಿಸಿದ್ದಾರೆ.

"ಶರ್ಮ ಹೇಳಿಕೆಯು ಒಂದು ನಿರ್ದಿಷ್ಟ ಧರ್ಮದ ಮನೋಭಾವವನ್ನು ನೋಯಿಸುವ ಮತ್ತು ಅವಮಾನಿಸುವ ಒಳ್ಳೆಯ ಯೋಜಿತ ರಾಜಕೀಯ ಮತ್ತು ಕ್ರಿಮಿನಲ್ ಪಿತೂರಿಯ ಭಾಗವಾಗಿದೆ. ಬಿಜೆಪಿ ನಾಯಕನ ತರ್ಕಬದ್ಧ ಪರಿಕಲ್ಪನೆಯು ಹಿಂದು ಧರ್ಮವನ್ನು ಹಾಸ್ಯಾಸ್ಪದವಾಗಿ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

 ಉತ್ತರ ಪ್ರದೇಶದ ಮಥೂರದಲ್ಲಿ ಕೌಶಾಲ್ಯಾಭಿವೃದ್ದಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಶರ್ಮಾ, ಸೀತೆ ಮಣ್ಣಿನ ಕುಡಿಕೆಯಿಂದ ಜನಿಸಿದ್ದು, ಆ ಸಂದರ್ಭದಲ್ಲಿ ಪ್ರಣಾಳ ಶಿಶು ಯೋಜನೆ ಪ್ರಗತಿಯಲ್ಲಿತ್ತು.
ಜನಕ ರಾಜ ಭೂಮಿ ಉಳುತ್ತಿದ್ದಾಗ ಸೀತೆ ಸಿಕ್ಕಿದ್ದಳು.  ಇದೇ ತಂತ್ರಜ್ಞಾನವನ್ನು ಪ್ರಣಾಳ ಶಿಶು ಎಂದು ಕರೆಯಲಾಗುತ್ತೆ ಎಂದು ಹೇಳಿಕೆ ನೀಡಿದ್ದ. ಇದು ವಿವಾದಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT