ಪ್ರಣಬ್ ಮುಖರ್ಜಿ 
ದೇಶ

ಆರ್‏ಎಸ್ಎಸ್ ಸಮಾವೇಶದಲ್ಲಿ ಪಾಲ್ಗೊಳ್ಳದಂತೆ ಹೇಳುವವರಿಗೆ ನಾಗ್‏ಪುರದಲ್ಲೇ ಉತ್ತರಿಸುವೆ: ಪ್ರಣಬ್ ಮುಖರ್ಜಿ

ಆರ್‏ಎಸ್ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಒತ್ತಡ ಹೇರುತ್ತಿರುವವರಿಗೆ ಜೂನ್ 7ರಂದು ನಾಗ್ ಪುರದಲ್ಲಿ ಉತ್ತರ ಹೇಳುವುದಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ನವದೆಹಲಿ: ಆರ್‏ಎಸ್ಎಸ್  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಒತ್ತಡ ಹೇರುತ್ತಿರುವವರಿಗೆ ಜೂನ್ 7ರಂದು ನಾಗ್ ಪುರದಲ್ಲಿ ಉತ್ತರ ಹೇಳುವುದಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
"ನಾನು ಹೇಳಬೇಕಾಗಿರುವುದನ್ನು ನಾಗ್ ಪುರದಲ್ಲಿ ಹೇಳುತ್ತೇನೆ. ನನಗೆ ಆರ್‏ಎಸ್ಎಸ್  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರುವಂತೆ ಕೋರಿ ಹಲವು ಪತ್ರಗಳು, ದೂರವಾಣಿ ಕರೆಗಳು ಬಂದಿದೆ. ನಾನು ಯಾವುದಕ್ಕೂ ಪ್ರತಿಕ್ರಯಿಸಿಲ್ಲ. ಅವರಿಗೆಲ್ಲಾ ನಾನು ನಾಗ್ ಪುರದಲ್ಲಿಯೇ ಪ್ರತಿಕ್ರಿಯೆ ನೀಡುತ್ತೇನೆ"  ಬೆಂಗಾಲಿ ದಿನಪತ್ರಿಕೆ ಆನಂದ್ ಬಜಾರ್ ಪತ್ರಿಕಾದಲ್ಲಿ ಮುಖರ್ಜಿ ಅವರ ಈ ಹೇಳಿಕೆ ದಾಖಲಾಗಿದೆ.
ಜೈರಾಮ್ ರಮೇಶ್, ಸಿ.ಕೆ. ಜಾಫರ್ ಶರೀಫ್ ಸೇರಿ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಮುಖರ್ಜಿ ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದರು.
ಕೇರಳ ವಿಧಾನಸಭೆ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಠಲ ’ಮಾಜಿ ರಾಷ್ಟ್ರಪತಿಗಳು ಆರ್‏ಎಸ್ಎಸ್  ಸಮಾವೇಶದಲ್ಲಿ ಪಾಲ್ಗೊಳ್ಳುವುದರಿಂದ ಜಾತ್ಯಾತೀತ ಮನಸ್ಸುಗಳಿಗೆ ಘಾಸಿಯಾಗಲಿದೆ’ ಎಂದಿದ್ದಾರೆ.
ಆದರೆ ಕಾಂಗ್ರೆಸ್ ಮುಖಂಡರಾದ ಪಿ. ಚಿದಂಬರಂ ಮುಖರ್ಜಿಯವರು ಆರ್‏ಎಸ್ಎಸ್  ಕಾರ್ಯಕ್ರಮಕ್ಕೆ ಹಾಜರಾಗಬೇಕು. ಅಲ್ಲಿ ಮಾತನಾಡುವ ವೇಳೆ ಆರ್ ಎಸ್ ಎಸ್ ಸಿದ್ದಾಂತದಲಿರುವ  ದೋಷಗಳನ್ನು ಎತ್ತಿ ತೋರಬೇಕು ಎಂದಿದ್ದಾರೆ. ಮುಖರ್ಜಿಯವರು ಆರ್‏ಎಸ್ಎಸ್   ಆಮಂತ್ರಣವನ್ನು ಒಪ್ಪಿದ್ದಾರೆ. ಅದರಂತೆ ಅವರು ಸಮಾವೇಶಕ್ಕೆ ಹಾಜರಾಗಬೇಕು ಎಂದು ಚಿದಂಬರಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT