ಸಂಗ್ರಹ ಚಿತ್ರ 
ದೇಶ

ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನ: ಯುವಕನ ಸಾವಿನ ಬಳಿಕ ಸೇನೆ ಗುರಿಯಾಗಿರಿಸಿ 3 ಗ್ರೆನೇಡ್ ದಾಳಿ

ಭದ್ರತಾ ವಾಹನಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಪ್ರಕರಣದಲ ಬಳಿಕ ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ಉಗ್ರರು 3 ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಸಿಆರ್'ಪಿಎಫ್ ಯೋಧರು ಸೇರಿ ಒಟ್ಟು 8 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ...

ಶ್ರೀನಗರ: ಭದ್ರತಾ ವಾಹನಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಪ್ರಕರಣದಲ ಬಳಿಕ ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ಉಗ್ರರು 3 ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಸಿಆರ್'ಪಿಎಫ್ ಯೋಧರು ಸೇರಿ ಒಟ್ಟು 8 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 
ಶ್ರೀನಗರದ ಫಟೇಕಡಲ್ ನಲ್ಲಿ ಗಸ್ತಿನಲ್ಲಿದ್ದ ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ಉಗ್ರರು ಈ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. 
ಕಳೆದ 24 ಗಂಟೆಗಳಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು 3 ಗ್ರೆನೇಡ್ ದಾಳಿಗಳು ನಡೆದಿವೆ. 
ಶುಕ್ರವಾರದ ಪ್ರಾರ್ಥನೆ ಮುಗಿಸಿದ ಬಳಿಕ ಶ್ರೀನಗರದ ಹಳೆಯ ಪ್ರದೇಶವಾದ ನೌಹಟ್ಟಾದಲ್ಲಿ ಯುವಕರು ಕಲ್ಲು ತೂರಾಟ ಆರಂಭಿಸಿದ್ದರು. ಈ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಸಿಆರ್'ಪಿಎಫ್ ಜೀಪ್ ಆಗಮಿಸಿತು. ಯುವಕರು ಸಿಕ್ಕಸಿಕ್ಕ ವಸ್ತುಗಳಿಂದ ದಾಳಿ ನಡೆಸಿದರು. ಮೇಲೆ ಹತ್ತಿ ನಿಂತು ತುಳಿಯಲು ಆರಂಭಿಸಿದ್ದರು. 
ಇದೇ ವೇಳೆ ಆಗಮಿಸಿದ ಮತ್ತೊಂದು ಜೀಪಿನ ಮೇಲೂ ಅವರ ಆಕ್ರೋಶ ವ್ಯಕ್ತವಾದಾಗ, ಅದರ ಚಾಲಕ ಸಿಲ್ಲಿಸದೇ ಚಾಲನೆ ಮಾಡಿಕೊಂಡು ಹೋಗಿದ್ದ. ಈ ವೇಳೆ ಇಬ್ಬರು ಯುವಕರು ಜೀಪಿನ ಕೆಳಗೆ ಸಿಲುಕಿದ್ದರು. ಈ ದೃಸ್ಯ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಜೀಪ್ ಕೆಳಗೆ ಸಿಕ್ಕಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಪೈಕಿ 21 ವರ್ಷದ ಕೈಸರ್ ಭಟ್ ಎಂಬಾತ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT