ನಿತೀಶ್ ಕುಮಾರ್ 
ದೇಶ

ಬಿಹಾರ ಎನ್ ಡಿಎ ಸಭೆಗೂ ಮುನ್ನ ಜೆಡಿಯು ನಾಯಕರ ಸಭೆ: ಕುತೂಹಲ ಮೂಡಿಸಿದ ನಿತೀಶ್ ನಡೆ

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರದೊಂದಿಗಿನ ಹಗ್ಗ-ಜಗ್ಗಾಟದಿಂದ ನಿತೀಶ್ ಕುಮಾರ್ ಬಿಜೆಪಿ ನಡುವಿನ ಎಲ್ಲವೂ ಸರಿ ಇಲ್ಲ ಎಂಬ ಊಹಾಪೋಹಕ್ಕೆ ಕಾರಣವಾಗಿತ್ತು.

ಪಾಟ್ನಾ: ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರದೊಂದಿಗಿನ ಹಗ್ಗ-ಜಗ್ಗಾಟದಿಂದ ನಿತೀಶ್ ಕುಮಾರ್ ಬಿಜೆಪಿ ನಡುವಿನ ಎಲ್ಲವೂ ಸರಿ ಇಲ್ಲ ಎಂಬ ಊಹಾಪೋಹಕ್ಕೆ ಕಾರಣವಾಗಿತ್ತು. ಇದಕ್ಕೆ ಪೂರಕವೆಂಬಂತೆ ಬಿಹಾರದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. 
ಬಿಹಾರ ಎನ್ ಡಿಎ ಸಭೆಗೂ ಮುನ್ನ ನಿತೀಶ್ ಕುಮಾರ್ ಸಭೆ ನಡೆಸಿದ್ದಾರೆ. ಜೂ.07 ರಂದು ಎನ್ ಡಿಎ ಸಭೆ ನಡೆಯಲಿದ್ದು ಇದಕ್ಕೂ ಮುನ್ನವೇ ನಿತೀಶ್ ಕುಮಾರ್ ಜೆಡಿಯು ಪಕ್ಷದ ಸಭೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ಜೆಡಿಯು ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಪವನ್ ವರ್ಮ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ತ್ಯಾಗಿ ಭಾಗಿಯಾಗಿದ್ದರು.
ಇದೇ ಸಭೆಯಲ್ಲಿ ಜೋಕಿತ್ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಅಭ್ಯರ್ಥಿಯ ಸೋಲಿಬ ಬಗ್ಗೆಯೂ ಚರ್ಚೆ ನಡೆಸಲಾಯಿತು. ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಸೋಲಿಗೆ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೆಲ್ ದರ ಕಾರಣ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 
ಇನ್ನು ಎನ್ ಡಿಎ ಜೊತೆ ಇರುವ ಆರ್ ಎಲ್ ಎಸ್ ಪಿ ಪಕ್ಷದ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಸಹ ಬಿಜೆಪಿ  ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಎನ್ ಡಿಎ ಮಿತ್ರಪಕ್ಷಗಳ ನಡುವೆ ಸಹಕಾರ ಇಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT