ಸಂಗ್ರಹ ಚಿತ್ರ 
ದೇಶ

ಮಧ್ಯ ಪ್ರದೇಶ ನಕಲಿ ಮತದಾರರ ಪಟ್ಟಿ: ತನಿಖೆಗೆ ಚುನಾವಣಾ ಆಯೋಗದಿಂದ ತಂಡ ರಚನೆ

ಭಾರಿ ಚರ್ಚೆಗೆ ಕಾರಣವಾಗಿರುವ ಮಧ್ಯಪ್ರದೇಶ ನಕಲಿ ಮತದಾರರ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತನಿಖೆಗೆ ಆದೇಶ ನೀಡಿದೆ.

ನವದೆಹಲಿ: ಭಾರಿ ಚರ್ಚೆಗೆ ಕಾರಣವಾಗಿರುವ ಮಧ್ಯಪ್ರದೇಶ ನಕಲಿ ಮತದಾರರ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತನಿಖೆಗೆ ಆದೇಶ ನೀಡಿದೆ.
ಪ್ರಸ್ತುತ ಕಾಂಗ್ರೆಸ್ ಪಕ್ಷದ ಆರೋಪದಂತೆ ಪತ್ತೆಯಾಗಿರುವ ನಕಲಿ ಮತದಾರರ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಚುನಾವಣಾ ಆಯೋಗ ತಂಡ ರಚನೆ ಮಾಡಿದೆ. ಮತದಾರರ ಪಟ್ಟಿಯಲ್ಲಿದ್ದಿರಬಹುದಾದ ದೋಷಗಳ ಕುರಿತು ತನಿಖೆ ನಡೆಸುವಂತೆ ಚುನಾವಣಾ ಆಯೋಗ ಈ ತಂಡಕ್ಕೆ ಆದೇಶಿಸಿದೆ.
ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಮತದಾರರ ಪಟ್ಟಿಯಲ್ಲಿ 60 ಲಕ್ಷ ನಕಲಿ ಮತದಾರರ ಹೆಸರು ಸೇರಿಸಿದೆ ಎಂದು ಕಾಂಗ್ರೆಸ್‌ನ ಆರೋಪದ ಬೆನ್ನಲ್ಲೇ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. ತಲಾ ಇಬ್ಬರು ಅಧಿಕಾರಿಗಳು ಇರುವ ನಾಲ್ಕು ತಂಡಗಳು ತನಿಖೆ ನಡೆಸಲಿದ್ದು, ಜೂನ್‌ 7ರಂದು ವರದಿ ಸಲ್ಲಿಸಲಿವೆ. 
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮಧ್ಯ ಪ್ರದೇಶ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಲೀನಾ ಸಿಂಗ್ ಅವರು, 'ಮತದಾರರ ಪಟ್ಟಿ ಕುರಿತಂತೆ ಕಾಂಗ್ರೆಸ್‌ ನಿಯೋಗ ದೂರಿನಲ್ಲಿ ಪ್ರಸ್ತಾಪಿಸಿರುವ ವಿಷಯಗಳು ಹಾಗೂ ಜನಸಂಖ್ಯೆ ಆಧಾರದ ಮೇಲೆ ಮತದಾರರ ಪಟ್ಟಿಯಲ್ಲಿ ಮಾಡಲಾಗಿರುವ ದಾಖಲಾತಿ ಕುರಿತಂತೆ ಕೂಲಂಕಷ ತನಿಖೆ ನಡೆಸುವಂತೆ ತಂಡಗಳಿಗೆ ಸೂಚಿಸಲಾಗಿದೆ. 
ಕಳೆದ ಫೆಬ್ರವರಿಯಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಮಧ್ಯಪ್ರದೇಶ ಮತದಾರರ ಪಟ್ಟಿಯ ವಿಚಾರವಾಗಿ ದೂರು ನೀಡಿತ್ತು. ಮುಕ್ತ, ನ್ಯಾಯಸಮ್ಮತವಾದ ಚುನಾವಣೆಗಳಿಗೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿತ್ತು. ಏಪ್ರಿಲ್ ತಿಂಗಳಲ್ಲಿ ಮಧ್ಯಪ್ರದೇಶ ಮತದಾರರ ಪಟ್ಟಿಯಲ್ಲಿ ಆರು ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಮತ್ತೆ ಮತದಾರ ಪಟ್ಟಿಯನ್ನು ನವೀಕರಣಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT