ದೇಶ

ಉಪಚುನಾವಣೆ ಫಲಿತಾಂಶದ ಬಳಿಕ ಅಮಿತ್ ಶಾ- ಯೋಗಿ ಆದಿತ್ಯನಾಥ್ ಭೇಟಿ

Srinivas Rao BV
ನವದೆಹಲಿ: ಉತ್ತರ ಪ್ರದೇಶ ಉಪಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ಬಳಿಕ ಇದೇ ಮೊದಲ ಬಾರಿಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. 
ಅಮಿತ್ ಶಾ-ಯೋಗಿ ಆದಿತ್ಯನಾಥ್ ಭೇಟಿಯ ಬಗ್ಗೆ ಈ ವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಮೂಲಗಳ ಪ್ರಕಾರ ಉಭಯ ನಾಯಕರೂ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಟ್ಟಾಗಿರುವುದರಿಂದ ಉಂಟಾಗಿರುವ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. 
ಉತ್ತರ ಪ್ರದೇಶ ರಾಜ್ಯ ಸರ್ಕಾರದ ವಿರುದ್ಧವೇ ಕೆಲವು ಸಂಸದರು ಹಾಗೂ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ರಾಜಕೀಯವಾಗಿ ಉತ್ತರ ಪ್ರದೇಶ ಹೆಚ್ಚಿನ ಮಹತ್ವ ಪಡೆದುಕೊಂಡಿರುವುದರಿಂದ ಬಿಜೆಪಿ ಉಪಚುನಾವಣೆಯ ಸೋಲಿನ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದೆ.  
SCROLL FOR NEXT