ಆರ್ ಎಸ್ಎಸ್ ಕಾರ್ಯಕ್ರಮ: ನಿರ್ಧಾರ ಮರುಪರಿಶೀಲಿಸಲು ಪ್ರಣಬ್ ಗೆ ಅಸ್ಸಾಂ ಕೈ ಮುಖಂಡನ ಸಲಹೆ 
ದೇಶ

ಆರ್ ಎಸ್ಎಸ್ ಕಾರ್ಯಕ್ರಮ: ನಿರ್ಧಾರ ಮರುಪರಿಶೀಲಿಸಲು ಪ್ರಣಬ್ ಗೆ ಅಸ್ಸಾಂ ಕೈ ಮುಖಂಡನ ಸಲಹೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಅಸ್ಸಾಂ ಕಾಂಗ್ರೆಸ್ ಮುಖಂಡ ರಿಪುನ್ ಬೋರಾ ಹೇಳಿದ್ದಾರೆ.

ಅಸ್ಸಾಂ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಅಸ್ಸಾಂ ಕಾಂಗ್ರೆಸ್ ಮುಖಂಡ ರಿಪುನ್ ಬೋರಾ ಹೇಳಿದ್ದಾರೆ. 
ಪ್ರಣಬ್ ಮುಖರ್ಜಿಗೆ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿರುವ ರಿಪುನ್ ಬೋರಾ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಈಗ ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ. ಆದರೆ ದೇಶ ಅವರನ್ನು ಕಾಂಗ್ರೆಸ್ ಗೆ ಸಮರ್ಪಿತವಾದ ಹಿರಿಯ ನಾಯಕ ಎಂದು ಗುರುತಿಸುತ್ತದೆ.  ನಾಗ್ಪುರದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುವುದು  ಸಾಮಾಜಿಕ-ರಾಜಕೀಯವಾಗಿ ದೂರಗಾಮಿ ಪರಿಣಾಮಗಳನ್ನು ಬೀರಲಿದೆ, ಆದ್ದರಿಂದ ಪ್ರಣಬ್ ಮುಖರ್ಜಿ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಬೋರಾ ಒತ್ತಾಯಿಸಿದ್ದಾರೆ. 
ಕಾಂಗ್ರೆಸ್ ನ ಜಾತ್ಯಾತೀತ ಸಿದ್ಧಾಂತಕ್ಕೆ ತದ್ವಿರುದ್ಧವಾಗಿರುವ ಸಿದ್ಧಾಂತ ಹೊಂದಿರುವ ಸಂಘಟನೆಯ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಹೋಗಲು ನಿರ್ಧರಿಸಿರುವುದು ಅಚ್ಚರಿ ಉಂಟುಮಾಡಿದೆ. ತುರ್ತು ಪರಿಸ್ಥಿತಿಯ ನಂತರ ಕಾಂಗ್ರೆಸ್ ಎದುರಿಸಿದ ಸಂಕಷ್ಟದ ದಿನಗಳಲ್ಲಿ ನೀವು ಪಕ್ಷದ ಜೊತೆಗೆ ನಿಂತವರು, ತುರ್ತು ಪರಿಸ್ಥಿತಿಯ ನಂತರ ಕಾಂಗ್ರೆಸ್ ಪಕ್ಷದ ಪುನರುಜ್ಜೀವನಕ್ಕೆ ನಿಮ್ಮ ಕೊಡುಗೆ, ಸಮರ್ಪಣೆಯನ್ನು ಎಂದಿಗೂ ಸ್ಮರಿಸುವಂಥಹದ್ದು, ಆದ್ದರಿಂದ ನಿಮ್ಮ ನಿರ್ಧಾರವನ್ನು ನೀವು ಮರುಪರಿಶೀಲಿಸಬೇಕು ಎಂದು ಅಸ್ಸಾಂ ಕೈ ಅಧ್ಯಕ್ಷ ರಿಪುನ್ ಬೋರಾ ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!