ಸಂವಿಧಾನ, ಮಾನವ ಹಕ್ಕುಗಳು ಅಪಾಯದಲ್ಲಿದೆ, : ಗೋವಾ ಆರ್ಚ್ ಬಿಷಪ್ 
ದೇಶ

ಸಂವಿಧಾನ, ಮಾನವ ಹಕ್ಕುಗಳು ಅಪಾಯದಲ್ಲಿದೆ, : ಗೋವಾ ಆರ್ಚ್ ಬಿಷಪ್

2019 ರ ಲೋಕಸಭಾ ಚುನಾವಣೆ ನಡೆಯುತ್ತಿದ್ದು ದೇಶಕ್ಕಾಗಿ ಪ್ರಾರ್ಥನೆ ಸಲ್ಲಿಸಲು ಕರೆ ನೀಡಿ ದೆಹಲಿ ಆರ್ಚ್ ಬಿಷಪ್ ವಿವಾದಕ್ಕೀಡಾಗಿದ್ದ ಬೆನ್ನಲ್ಲೆ ಗೋವಾ ಆರ್ಚ್ ಬಿಷಪ್ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಪಣಜಿ: 2019 ರ ಲೋಕಸಭಾ ಚುನಾವಣೆ ನಡೆಯುತ್ತಿದ್ದು ದೇಶಕ್ಕಾಗಿ ಪ್ರಾರ್ಥನೆ ಸಲ್ಲಿಸಲು ಕರೆ ನೀಡಿ ದೆಹಲಿ ಆರ್ಚ್ ಬಿಷಪ್ ವಿವಾದಕ್ಕೀಡಾಗಿದ್ದ ಬೆನ್ನಲ್ಲೆ ಗೋವಾ ಆರ್ಚ್ ಬಿಷಪ್ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. 
ಮಾನವಹಕ್ಕುಗಳು, ದೇಶದ ಸಂವಿಧಾನ ಅಪಾಯದಲ್ಲಿದೆ ಎಂದು ಗೋವಾ ಆರ್ಚ್ ಬಿಷಪ್ ಫಿಲಿಪ್ ನೆರಿ ಫೆರಾವೊ, ಯಾರು ಏನನ್ನು ತಿನ್ನಬೇಕು, ಹೇಗೆ ಉಡುಗೆಗಳನ್ನು ತೊಡಬೇಕು, ಹೇಗೆ ಪೂಜಿಸಬೇಕು ಎಂಬುದನ್ನು ನಿರ್ಧರಿಸುವ ಏಕ ಸಂಸ್ಕೃತಿಯ ಟ್ರೆಂಡ್ ದೇಶದಲ್ಲಿ ಪ್ರಾರಂಭವಾಗಿದ್ದು, ದೇಶದ ಸಂವಿಧಾನ ಅಪಾಯಕ್ಕೆ ಸಿಲುಕಿದೆ ಎಂದು ಹೇಳಿದ್ದಾರೆ. 
ಗೋವಾ ಕ್ಯಾಥೋಲಿಕ್ ಗಳಿಗೆ ಬರೆದಿರುವ ಪತ್ರದಲ್ಲಿ ಆರ್ಚ್ ಬಿಷಪ್ ಸಾಮಾಜಿಕ ಚಳುವಳಿಯ ಬಗ್ಗೆ ಮಾತನಾಡಿದ್ದು, ಗೋವಾದಲ್ಲಿರುವ ಕ್ಯಾಥೋಲಿಕ್ ಗಳು ಸಾಮಾಜಿಕ ಹಾಗೂ ರಾಜಕೀಯ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಕರೆ ನೀಡಿದ್ದಾರೆ. ಚುನಾವಣೆಯ ಸಂದರ್ಭಗಳಲ್ಲಿ ಅಭ್ಯರ್ಥಿಗಳು ಸುಳ್ಳು ಭರವಸೆ ನೀಡುವ ಮೂಲಕ ಜನರನ್ನು ಗೊಂದಲಕ್ಕೀಡುಮಾಡುತ್ತಾರೆ. ಇಂದು ನಮ್ಮ ಸಂವಿಧಾನ ಅಪಾಯಕ್ಕೆ ಸಿಲುಕಿದೆ ಹಾಗಾಗಿರುವುದಕ್ಕೇ ಬಹುತೇಕ ಜನರು ಅಭದ್ರತೆಯಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ಫೆರಾವೊ ತಿಳಿಸಿದ್ದಾರೆ. 
ಈ ದೃಷ್ಟಿಯಿಂದ ಪ್ರಮುಖವಾಗಿ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ನಾವು ಸಂವಿಧಾನವನ್ನು ಉಳಿಸುವುದಕ್ಕೆ ಕೆಲಸ ಮಾಡಬೇಕಾಗಿದೆ ಎಂದು ನೆರಿ ಫೆರಾವೊ ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT