ಗೋವಾ ಇಂಧನ ಸಚಿವ ಪಾಂಡುರಂಗ ಮಡ್ಕೈಕರ್ 
ದೇಶ

ಮುಂಬೈ; ಗೋವಾ ಇಂಧನ ಸಚಿವರಿಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಮುಂಬೈ ಪ್ರವಾಸದಲ್ಲಿದ್ದ ಗೋವಾ ಇಂಧನ ಸಚಿವ ಪಾಂಡುರಂಗ ಮಡ್ಕೈಕರ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ...

ಪಣಜಿ: ಮುಂಬೈ ಪ್ರವಾಸದಲ್ಲಿದ್ದ ಗೋವಾ ಇಂಧನ ಸಚಿವ ಪಾಂಡುರಂಗ ಮಡ್ಕೈಕರ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. 
ನಿನ್ನೆಯಷ್ಟೇ ಮುಂಬೈಗೆ ಸಚಿವರು ಭೇಟಿ ನೀಡಿದ್ದರು. ಈ ವೇಳೆ ಇದ್ದಕ್ಕಿದ್ದಂತೆಯ ಅನಾರೋಗ್ಯಕ್ಕೀಡಾದರು. ಸಚಿವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಮುಂಬೈನ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಯಿತು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. 
ಪ್ರಸ್ತುತ ಸಚಿವರಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗುತ್ತಿದ್ದು, ಆರೋಗ್ಯ ಸ್ಥಿತಿ ಕುರಿತಂತೆ ಮಾಹಿತಿ ತಿಳಿದುಬರಬೇಕಿದೆ ಎಂದು ತಿಳಿಸಿದ್ದಾರೆ. 
ಕೆಲಸದ ನಿಮಿತ್ತ ಸಚಿವರು ಮುಂಬೈಗೆ ಭೇಟಿ ನೀಡಿದ್ದರು. ಮಹಾರಾಷ್ಟ್ರದಲ್ಲಿದ್ದಾಗಲೂ ಆಗಾಗ ಹೃದಯಾಘಾತ ಸಂಭವಿಸುತ್ತಿತ್ತು ಎಂದು ಗೋವಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ತನವಾದೆ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT