ಚಿದಂಬರಂ 
ದೇಶ

ಎಫ್ ಐ ಆರ್ ದಾಖಲಿಸಿಲ್ಲ, ನನ್ನ ವಿರುದ್ಧ ಇನ್ನೂ ತನಿಖೆ : ಇಡಿ ವಿಚಾರಣೆಗೆ ಚಿದಂಬರಂ ಹೇಳಿಕೆ

ಏರ್ ಸೆಲ್ - ಮ್ಯಾಕ್ಸಿಸ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರನ್ನು ವಿಚಾರಣೆ ನಡೆಸಿದೆ

ನವದೆಹಲಿ: ಏರ್ ಸೆಲ್ - ಮ್ಯಾಕ್ಸಿಸ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ ಇಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರನ್ನು  ವಿಚಾರಣೆ ನಡೆಸಿದ್ದು, ತನಿಖಾ ದಳಕ್ಕೆ ಎಲ್ಲಾ ಉತ್ತರವನ್ನು  ನೀಡಿದ್ದಾರೆ. ಸರ್ಕಾರದ ದಾಖಲೆಗಳಲ್ಲಿ ಅದು ಈಗಾಗಲೇ ದಾಖಲಾಗಿದೆ.

ತಮ್ಮ ವಿರುದ್ಧ ಎಫ್ ಐಆರ್ ದಾಖಲಿಸಿಲ್ಲ. ಆದರೂ  ಉದ್ದೇಶಪೂರ್ವಕವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.


ಆರು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ  ವಿಚಾರಣೆ ನಡೆಸಿದೆ. ಅದರಲ್ಲಿ ಅರ್ಧಕ್ಕೂ ಹೆಚ್ಚು ಸಮಯವನ್ನು  ದೋಷವಿಲ್ಲದೆ ಉತ್ತರ ಟೈಪ್ ಮಾಡಲು, ಹೇಳಿಕೆ ಓದಲು ಹಾಗೂ ಪಠಣ ಮಾಡಲು  ತೆಗೆದುಕೊಳ್ಳಲಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.

 ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ  ಜಾರಿ ನಿರ್ದೇಶನಾಲಯ ಇಂದು ಚಿದಂಬರಂ ಅವರ ಹೇಳಿಕೆಯನ್ನು ದಾಖಲು ಮಾಡಿಕೊಂಡಿದೆ.

3, 500 ಕೋಟಿ ಮೊತ್ತದ ಏರ್ ಸೆಲ್- ಮ್ಯಾಕ್ಸಿಲ್  ಒಪ್ಪಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಾರ್ತಿ ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ಚಿದಂಬರಂ ಅವರ ಪಾತ್ರ ಕೇಳಿಬಂದಿತ್ತು.

ಜಾರಿನಿರ್ದೇಶನಾಲಯದಿಂದ ಬಂಧನದಿಂದ ಪಾರು ಮಾಡುವಂತೆ ಕಳೆದ ವಾರ ಚಿದಂಬರಂ   ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಒ ಪಿ ಸೈನಿ ಬಳಿ ಮನವಿ ಮಾಡಿಕೊಂಡಿದ್ದರು.  ಜುಲೈ 10 ರವೆರೆಗೂ  ಅವರನ್ನು ಬಂಧಿಸದಂತೆ  ಇದೇ ನ್ಯಾಯಾಲಯ ಇಂದು ಇಡಿಗೆ ನಿರ್ದೇಶನ  ನಿರ್ದೇಶಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT