ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

ರಫೇಲ್ ಒಪ್ಪಂದದಲ್ಲಿ ಯಾವುದೇ ಹಗರಣಗಳೂ ನಡೆದಿಲ್ಲ; ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ರಫೇಲ್ ಒಪ್ಪಂದದಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಆಧಾರ ರಹಿತವಾದದ್ದು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ; ರಫೇಲ್ ಒಪ್ಪಂದದಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಆಧಾರ ರಹಿತವಾದದ್ದು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹೇಳಿದ್ದಾರೆ. 
ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಫೇಲ್ ಒಪ್ಪಂದದಲ್ಲಿ ಯಾವುದೇ ರೀತಿಯ ಅಕ್ರಮಗಳೂ ನಡೆದಿಲ್ಲ. ಆರೋಪಗಳು ಆಧಾರ ರಹಿತವಾದದ್ದು ಎಂದು ಹೇಳಿದ್ದಾರೆ. 
ಇದೇ ವೇಳೆ ರಕ್ಷಣಾ ಇಲಾಖೆಯಲ್ಲಿ ಶಸ್ತ್ರಾಸ್ತ್ರಗಳ ಅಭಾವವಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದ್ದಾರೆ. 
ಒಂದೆಡೆ ಸಾವಿರಾರು ಕೋಟಿ ವೆಚ್ಚ ಮಾಡಿ ವಿದೇಶಗಳಿಂದ ಅತ್ಯಾಧುನಿಕ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಸರ್ಕಾರ, ಮತ್ತೊಂದೆಡೆ ಸೈನಿಕರಿಗೆ ಸೇನಾ ಸಮವಸ್ತ್ರ ಖರೀದಿಸಲೂ ಹಣವಿಲ್ಲದ ಸ್ಥಿತಿ ತಲುಪಿದೆ ಎಂಬ ಗಂಭೀರ ಆರೋಪಗಳು ಈ ಹಿಂದೆ ಕೇಳಿ ಬಂದಿದ್ದವು. 
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ತುರ್ತು ಶಸ್ತ್ರಾಸ್ತ್ರ ಖರೀದಿಗೆ ಹೆಚ್ಚುವರಿ ಹಣ ಒದಗಿಸಿಲ್ಲ ಹೀಗಾಗಿ ಸರ್ಕಾರಿ ಸಶಸ್ತ್ರ ಕಾರ್ಖಾನೆಗಳಿಂದ ಸೇನೆಗೆ ಪೂರೈಕೆ ಪ್ರಮಾಣವನ್ನು ಶೇ.94ರಿಂದ ಶೇ.50ಕ್ಕೆ ಇಳಿಸಲಾಗಿದೆ. ಈ ಹಣವನ್ನು ತುರ್ತು ಸಮಯಕ್ಕೆ ಬೇಕಾದ ಶಸ್ತ್ರಾಸ್ತ್ರ ಖರೀದಿಗೆ ಬಳಸಲು ಸೇನೆ ನಿರ್ಧರಿಸಿದೆ. ಹೀಗೆ ಹಣಕಾಸಿನ ನೆರವಿನ ಕಡಿತದ ಪರಿಣಾಮ ಯೋಧರು ತಮ್ಮ ಸಮವಸ್ತ್ರ ಟೋಪಿ, ಬೆಲ್ಟ್'ಗಳು, ಶೂಗಳನ್ನು ತಾವೇ ಖರೀದಿಸಬೇಕಾಗಿದೆ. ಕೆಲವು ವಾಹನಗಳ ಬಿಡಿಭಾಗಗಳ ಖರೀದಿಗೂ ಸೇನೆಯಲ್ಲಿ ಅನುದಾನದ ಕೊರತೆಗಳಿವೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT