ಸಾಂದರ್ಭಿಕ ಚಿತ್ರ 
ದೇಶ

ಪ್ರದ್ಯುಮನ್ ಕೊಲೆ ಪ್ರಕರಣ: ಬಾಲಾಪರಾಧಿ ಜಾಮೀನು ಅರ್ಜಿ ವಜಾ

ಗುರುಗ್ರಾಮದ ರಾಯನ್ ಇಂಟರ್ ನ್ಯಾಷನಲ್ ಶಾಲೆಯ ಏಳು ವರ್ಷದ ಬಾಲಕನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಅಪ್ರಾಪ್ತ ಬಾಲಕನಿಗೆ ಜಾಮೀನು ನೀಡಲು ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ತಿರಸ್ಕರಿಸಿದೆ.

ಪಂಜಾಬ್:  ಗುರುಗ್ರಾಮದ  ರಾಯನ್ ಇಂಟರ್ ನ್ಯಾಷನಲ್  ಶಾಲೆಯ ಏಳು ವರ್ಷದ ಬಾಲಕನ  ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ  ಬಾಲಕನಿಗೆ  ಜಾಮೀನು ನೀಡಲು  ಪಂಜಾಬ್  ಹಾಗೂ ಹರಿಯಾಣ ಹೈಕೋರ್ಟ್ ತಿರಸ್ಕರಿಸಿದೆ.

ಪ್ರದ್ಯುಮನ್ ಕೊಲೆ ಪ್ರಕರಣದಲ್ಲಿ ಬಾಲಾಪರಾಧಿ ವಯಸ್ಕರಂತೆ ಕೊಲೆ ಮಾಡಿದ್ದಾನೆ ಎಂದು ಗುರುಗ್ರಾಮನಲ್ಲಿನ   ಮಕ್ಕಳ ಸೆಷನ್ಸ್ ನ್ಯಾಯಾಲಯ ಮೇ 21 ರಂದು  ತೀರ್ಪು ನೀಡಿತ್ತು ಎಂದು  ಮೃತ ಬಾಲಕನ ಕುಟುಂಬದ ಪರ ವಾದಿಸುತ್ತಿರುವ ವಕೀಲ  ಸುಶೀಲ್ ತೆಕ್ರಿವಾಲ್ ತಿಳಿಸಿದ್ದಾರೆ.

ಮಕ್ಕಳ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನು  ಬಾಲಾಪರಾಧಿ ನ್ಯಾಯಾಂಗ ಮಂಡಳಿ ಎತ್ತಿ ಹಿಡಿದಿದೆ.  ಆತನಿಗೆ ಕಠಿಣ ಶಿಕ್ಷೆಯಾಗುವುದನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.

ರೆಯಾನ್ ಇಂಟರ್ ನ್ಯಾಷನಲ್  ಶಾಲೆಯ  ಎರಡನೇ ತರಗತಿ ವಿದ್ಯಾರ್ಥಿ ಪ್ರದ್ಯುಮನ್ ನನ್ನು 11 ನೇ ತರಗತಿ ವಿದ್ಯಾರ್ಥಿ ಕಳೆದ ವರ್ಷ  ಕೊಲೆ ಮಾಡಿದ್ದ ಆರೋಪದ ಮೇರೆಗೆ ಬಾಲಾಪರಾಧಿಯನ್ನು  ಸಿಬಿಐ ಕಳೆದ ವರ್ಷ ಬಂಧಿಸಿತ್ತು,

ಸೆ .8ರಂದು ಎಂದಿನಂತೆ ಶಾಲೆಗೆ ತೆರಳಿದ್ದ ಪ್ರದ್ಯುಮನ್ ಠಾಕೂರ್‌ ಮೃತದೇಹ ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT