ನಟ ರಜನಿಕಾಂತ್ 
ದೇಶ

'ಕಾಳಾ' ಚಿತ್ರ ಪ್ರದರ್ಶಿಸುವ ಚಿತ್ರಮಂದಿರಗಳಿಗೆ ಭದ್ರತೆ ನೀಡಿ; ಸಿಎಂಗೆ ನಟ ರಜನಿಕಾಂತ್ ಮನವಿ

ಕಾಳಾ ಚಿತ್ರ ಪ್ರದರ್ಶನ ಮಾಡುವ ಕರ್ನಾಟಕ ರಾಜ್ಯದ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ರಜನಿಕಾಂತ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಬುಧವಾರ ಮನವಿ ಮಾಡಿಕೊಂಡಿದ್ದಾರೆ...

ಬೆಂಗಳೂರು; ಕಾಳಾ ಚಿತ್ರ ಪ್ರದರ್ಶನ ಮಾಡುವ ಕರ್ನಾಟಕ ರಾಜ್ಯದ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ನಟ ರಜನಿಕಾಂತ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಬುಧವಾರ ಮನವಿ ಮಾಡಿಕೊಂಡಿದ್ದಾರೆ. 
ಕಾಳಾ ಚಿತ್ರ ಜೂನ್.7 ರಂದು ಬಿಡುಗಡೆಗೊಳ್ಳುತ್ತಿದ್ದು, ಕಾವೇರಿ ವಿವಾದ ಸಂಬಂಧ ರಜನಿಕಾಂತ್ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಕನ್ನಡ ಪರ ಸಂಘಟನೆಗಳು ಚಿತ್ರ ಪ್ರದರ್ಶನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. 
ಈ ಹಿನ್ನಲೆಯಲ್ಲಿ ಚಿತ್ರದ ನಿರ್ಮಾಣ ಸಂಸ್ಥೆಯಾದ ವೆಂಡರ್'ಬರ್ ಫಿಲಂ ಪ್ರೈವೇಟ್ ಲಿಮಿಟೆಡ್ ಹಾಗೂ ನಿರ್ಮಾಪಕರಾದ ನಟ ರಜನಿಕಾಂತ್ ಪುತ್ರಿ ಐಶ್ವರ್ಯ ಹಾಗೂ ಅಳಿಯ ಧನುಷ್ ಅವರು ಹೈಕೋರ್ಟ್'ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ರಾಜ್ಯದೆಲ್ಲೆಡೆ ಚಿತ್ರ ಬಿಡುಗಡೆಗೆ ಸೂಕ್ತ ಭದ್ರತೆ ನೀಡಲು ಸರ್ಕಾರ ಹಾಗೂ ರಾಜ್ಯ ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿದ್ದರು. 
ಈ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯದಲ್ಲಿ ಕಾಲಾ ಚಿತ್ರವನ್ನು ಪ್ರದರ್ಶಿಸುವ ಪ್ರದೇಶ ಮತ್ತು ಚಿತ್ರದ ಪ್ರದರ್ಶನಕ್ಕೆ ಅಡ್ಡಿಪಡಿಸಲಿರುವ ಸಂಘಟನೆಗಳ ವ್ಯಕ್ತಿಗಳ ಬಗ್ಗೆ ವಿವರ ಸಲ್ಲಿಸುವಂತೆ ಹಾಗೂ ಚಿತ್ರಪ್ರದರ್ಶನಕ್ಕೆ ಯಾವುದೇ ರೀತಿಯ ಅಡಚಣೆಗಳಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು. 
ಇದರ ಬೆನ್ನಲ್ಲೇ ಹೇಳಿಕೆ ನೀಡಿರುವ ರಜನಿಕಾಂತ್ ಅವರು, ಹೆಚ್.ಡಿ.ಕುಮಾರಸ್ವಾಮಿಯವರ ಪರಿಸ್ಥಿತಿಯನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಇದು ಕರ್ನಾಟಕಕ್ಕೆ ಒಳ್ಳೆಯದಲ್ಲ. ಇಡೀ ವಿಶ್ವದಾದ್ಯಂತ ಚಿತ್ರ ಬಿಡುಗಡೆಗೊಳ್ಳುತ್ತಿರುವಾಗ, ಕರ್ನಾಟಕದಲ್ಲಿ ಮಾತ್ರ ಚಿತ್ರಕ್ಕೆ ನಿಷೇಧ ಹೇರಿದರೆ, ವಿಚಾರ ದೊಡ್ಡ ಮಟ್ಟದ್ದಾಗುತ್ತದೆ ಎಂದು ಹೇಳಿದ್ದಾರೆ. 
ಇದರಂತೆ ರಾಜ್ಯ ಚಲನಚಿತ್ರ ಮಂಡಳಿಯ ಬಳಿಯೂ ಮನವಿ ಮಾಡಿಕೊಂಡಿರುವ ಅವರು, ಚಿತ್ರ ಬಿಡುಗಡೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ವಿತರಕರಿಗೆ ಯಾವುದೇ ರೀತಿಯ ಸಮಸ್ಯೆಯಾದಂತೆ ಮಂಡಳಿ ನೋಡಿಕೊಳ್ಳಬೇಕು. ಕಾಳಾ ಚಿತ್ರ ನಿಷೇಧಿಸುವಂತೆ ಮಂಡಳಿ ಆಗ್ರಹಿಸುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT