ರಾಮನಾಥ ಕೋವಿಂದ್ 
ದೇಶ

ಕಲಾಂ ಬಳಿಕ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಇಫ್ತಿಯಾರ್ ಕೂಟ ರದ್ದು!

ರಂಜಾನ್ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಲಾಗುತ್ತಿದ್ದ ಇಫ್ತಿಯಾರ್ ಕೂಟವನ್ನು ರದ್ದು ಪಡಿಸಲಾಗಿದೆ...

ನವದೆಹಲಿ: ರಂಜಾನ್ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಲಾಗುತ್ತಿದ್ದ ಇಫ್ತಿಯಾರ್ ಕೂಟವನ್ನು ರದ್ದು ಪಡಿಸಲಾಗಿದೆ. 
ರಂಜಾನ್ ಅಂಗವಾಗಿ ಇದೇ ಜೂನ್ 16ರಂದು ರೋಜಾ ನಡೆಯಲಿದೆ. ಸಾಮಾನ್ಯವಾಗಿ ರಾಷ್ಟ್ರಪತಿ ಭವನದಲ್ಲಿ ಈವರೆಗೂ ಹಬ್ಬದ ಹಿಂದಿನ ದಿನ ರಾಷ್ಟ್ರೀಯ ಪಕ್ಷಗಳ ನಾಯಕರು, ಮುಸ್ಲಿಂ-ಧಾರ್ಮಿಕ ಸಂಘಟನೆಗಳ ಮುಖಂಡರನ್ನು ಕರೆಸಿ ಇಫ್ತಿಯಾರ್ ಕೂಟವನ್ನು ಆಯೋಜಿಸಲಾಗುತ್ತಿತ್ತು.
ಆದರೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಇಫ್ತಿಯಾರ್ ಕೂಟವನ್ನು ನಡೆಸದಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಕೂಡ ರಾಷ್ಟ್ರಪತಿ ಭವನದಲ್ಲಿ ಇಫ್ತಿಯಾರ್ ಕೂಟವನ್ನು ರದ್ದುಪಡಿಸಿ ಇದಕ್ಕೆ ತಗುಲುವ ವೆಚ್ಚದ ಹಣವನ್ನು ಅನಾಥಾಶ್ರಮಗಳಿಗೆ ನೀಡಿ ಮಾನವೀಯತೆ ಮೆರೆದಿದ್ದರು. 
ಅಬ್ದುಲ್ ಕಲಾಂ ಮಾದರಿಯನ್ನೇ ರಾಮನಾಥ್ ಕೋವಿಂದ್ ಅವರು ಅನುಸರಿಸುತ್ತಿದ್ದು ಅದರ ಹಣವನ್ನು ಅನಾಥಾಶ್ರಮಗಳಿಗೆ ನೀಡಲು ತೀರ್ಮಾನಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ಖಚಿತಪಡಿಸಿವೆ. ಅಬ್ದುಲ್ ಕಲಾಂ ಅವರು ಐದು ವರ್ಷ ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಐದು ವರ್ಷವೂ ಇಫ್ತಿಯಾರ್ ಕೂಟವನ್ನು ನಡೆಸಿರಲಿಲ್ಲ. ಆದರೆ ಬಳಿಕ ಪ್ರತಿಭಾ ಪಾಟೀಲ್ ಹಾಗೂ ಪ್ರಣಬ್ ಮುಖರ್ಜಿ ಇಫ್ತಿಯಾರ್ ಕೂಟವನ್ನು ಆಯೋಜಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT