ಸಾಂದರ್ಭಿಕ ಚಿತ್ರ 
ದೇಶ

ಉಗ್ರರ ಬೆದರಿಕೆ ಹಿನ್ನೆಲೆ, ಉತ್ತರ ಪ್ರದೇಶದಲ್ಲಿ ಹೈ ಆಲರ್ಟ್ : ಬಿಗಿ ಭದ್ರತೆ

ಪಾಕಿಸ್ತಾನ ಮೂಲದ ಲಷ್ಕರ್ ಇ- ತೊಯ್ಬಾ ಸಂಘಟನೆಯಿಂದ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ರಾಜ್ಯಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಮಥುರಾ: ಪಾಕಿಸ್ತಾನ ಮೂಲದ ಲಷ್ಕರ್ ಇ- ತೊಯ್ಬಾ ಸಂಘಟನೆಯಿಂದ ಬೆದರಿಕೆ  ಪತ್ರದ ಹಿನ್ನೆಲೆಯಲ್ಲಿ  ಉತ್ತರ ಪ್ರದೇಶ ರಾಜ್ಯಾದ್ಯಂತ  ಬಿಗಿ ಭದ್ರತೆ ಏರ್ಪಡಿಸಲಾಗಿದೆ.

 ಕಾಶಿ ವಿಶ್ವನಾಥ ಮತ್ತು ಕೃಷ್ಣ ಜನ್ಮಭೂಮಿಯ ದೇವಾಲಯಗಳು ಹಾಗೂ ಕೆಲ ರೈಲ್ವೆ ನಿಲ್ದಾಣಗಳನ್ನು  ಸ್ಟೋಟಿಸುವುದಾಗಿ  ಮೇ 29 ರಂದು  ಎಲ್ ಇಟಿ ಕಮಾಂಡರ್ ಮೌಲಾನಾ ಅಬು ಶೈಕ್ ಕಳುಹಿಸಿದ ಬೆದರಿಕೆ ಪತ್ರವನ್ನು ಉತ್ತರ ರೈಲ್ವೆ  ಅಧಿಕಾರಿಗಳು ಪಡೆದಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬದಿದೆ.

ದೇವಾಲಯಗಳ ನಗರ ಮಥುರಾದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶ್ರೀ ಕೃಷ್ಣ ಜನ್ಮಭೂಮಿ,  ಬಂಕಿ ಬಿಹರಿ ದೇವಾಲಯ, ಮಥುರಾ ಜಂಕ್ಷನ್ ಮತ್ತು  ಸಂಸ್ಕರಣಾಗಾರ ಮತ್ತಿತರ ಪ್ರಮುಖ ಪ್ರದೇಶಗಳಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಪ್ರದೇಶದಲ್ಲಿ ಯಾವಾಗಲೂ ಹೆಚ್ಚಿನ ಪ್ರಮಾಣದಲ್ಲಿ ಭದ್ರತೆ ಕೈಗೊಳ್ಳಲಾಗಿರುತ್ತದೆ. ಆದರೆ. ಈ ರೀತಿಯ ಯಾವುದೇ ಸಣ್ಣ ಸುಳಿವು ಸಿಕ್ಕರೂ ಭದ್ರತೆ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಾಗುತ್ತದೆ ಎಂದು  ಪೊಲೀಸ್ ವರಿಷ್ಠಾಧಿಕಾರಿ  ಸಿದ್ದಾರ್ಥ ವರ್ಮಾ  ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಬೆದರಿಕೆಗಳಿಂದ ನಗರದ ಯಾತ್ರಿಕರು ಆತಂಕಗೊಂಡಿದ್ದಾರೆ.ಆದಾಗ್ಯೂ,   ದೇವರೂ ಎಲ್ಲವನ್ನೂ ನೋಡಿಕೊಳ್ಳುತ್ತಾನೆ. ಯಾವುದೇ ಹಾನಿಯಾಗದಂತೆ ಮಾಡುತ್ತಾನೆ. "ಯಾವುದೇ ಹಾನಿ ಇಲ್ಲ, ನಂಬಿಕೆ ಮೇಲೆ ಭಯೋತ್ಪಾದನೆಯಿಂದ ಯಾವುದೇ ಪರಿಣಾಮ  ಆಗಲ್ಲ ಎಂದು  ಯಾತ್ರಿಕರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT