ಸಂಗ್ರಹ ಚಿತ್ರ 
ದೇಶ

ಜಾರ್ಖಂಡ್: ನಕ್ಸಲೀಯರ ದಾಳಿಗೆ ಕೋಬ್ರಾ ಕಮಾಂಡೋ ಹುತಾತ್ಮ, ಪೊಲೀಸ್ ಅಧಿಕಾರಿಗೆ ಗಾಯ

ಜಾರ್ಖಂಡ್ ನಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಓರ್ವ ಕೋಬ್ರಾ ಕಮಾಂಡೋ ಪಡೆಯ ಯೋಧ ಹುತಾತ್ಮನಾಗಿದ್ದು, ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ.

ರಾಂಚಿ: ಜಾರ್ಖಂಡ್ ನಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಓರ್ವ ಕೋಬ್ರಾ ಕಮಾಂಡೋ ಪಡೆಯ ಯೋಧ ಹುತಾತ್ಮನಾಗಿದ್ದು, ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ.
ಜಾರ್ಖಂಡ್ ನ ಸರೈಕೆಲಾ ಜಿಲ್ಲೆಯ ಕುಂತಿ ಗಡಿಯ ಕಾರು ಕುಚೈ ಎಂಬ ಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿರುವ ಕುರಿತು ಮಾಹಿತಿ ಪಡೆದ ಸಿಆರ್ ಪಿಎಫ್ ನ ಕೋಬ್ರಾ ಕಮಾಂಡೋ ಪಡೆ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಭೀಕರ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಕೋಬ್ರಾ ಕಮಾಂಡೋ ಪಡೆಯ ಯೋಧನಿಗೆ ಗುಂಡೇಟು ತಗುಲಿ ಹುತಾತ್ಮನಾಗಿದ್ದು, ಅಂತೆಯೇ ಸ್ಥಳೀಯ ಎಸಿಪಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಎನ್ ಕೌಂಟರ್ ಪ್ರಗತಿಯಲ್ಲಿದ್ದು, ಘಟನಾ ಪ್ರದೇಶವನ್ನು ಸೈನಿಕರು ಸುತ್ತುವರೆದಿದ್ದಾರೆ.
ಘಟನಾ ಸ್ಥಳಕ್ಕೆ ತುರ್ತಾಗಿ ಒಂದು ಆ್ಯಂಬುಲೆನ್ಸ್ ಮತ್ತು ಹೆಲಿಕಾಪ್ಟರ್ ರವಾನೆ ಮಾಡಲಾಗಿದ್ದು, ಗಾಯಾಳು ಸೈನಿಕರನ್ನು ಏರ್ ಲಿಫ್ಟ್ ಮಾಡಲಾಗುತ್ತಿದೆ. 
ಪೊಲೀಸ್ ಮೂಲಗಳು ತಿಳಿಸಿರುವಂತೆ ಕುಖ್ಯಾತ ನಕ್ಸಲ್ ಮುಖಂಡ ಮಹಾರಾಜ್ ಪ್ರಮಾಣಿಕ್ ಸ್ಥಳದಲ್ಲಿದ್ದ ಎಂದು ತಿಳಿದುಬಂದಿದೆ. ಇನ್ನು ನಕ್ಸಲ್ ತಂಡದಲ್ಲೂ ಸಾಕಷ್ಟು ಸಾವು-ನೋವುಗಳಾಗಿರುವ ಶಂಕೆ ಇದ್ದು, ಶೋಧ ಕಾರ್ಯದ ಬಳಿಕ ವಿವರ ತಿಳಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT