ಹರ್ಯಾಣ ಮುಖ್ಯಮಂತ್ರಿ ಎಂಎಲ್ ಖಟ್ಟಾರ್ ಜೊತೆ ಗೀತಾ ಪೊಗಟ್ 
ದೇಶ

ಕ್ರೀಡಾಪಟುಗಳು ವೇತನದ ಮೂರನೇ ಒಂದು ಭಾಗ ನೀಡಬೇಕೆಂಬ ಆದೇಶವನ್ನು ತಡೆಹಿಡಿದ ಹರ್ಯಾಣ ಸರ್ಕಾರ

ರಾಜ್ಯದ ಕ್ರೀಡಾಪಟುಗಳು ತಮ್ಮ ವೇತನದ ಮೂರನೇ ಒಂದು ಭಾಗವನ್ನು ಕ್ರೀಡೆಯ ಬೆಳವಣಿಗೆಗೆ ...

ಚಂಡೀಗಢ: ರಾಜ್ಯದ ಕ್ರೀಡಾಪಟುಗಳು ತಮ್ಮ ವೇತನದ ಮೂರನೇ ಒಂದು ಭಾಗವನ್ನು ಕ್ರೀಡೆಯ ಬೆಳವಣಿಗೆಗೆ ಹರ್ಯಾಣ ಕ್ರೀಡಾ ಮಂಡಳಿಗೆ ನೀಡಬೇಕೆಂಬ ಸರ್ಕಾರದ ನಿರ್ಧಾರವನ್ನು ತಡೆಹಿಡಿಯಲಾಗಿದೆ ಎಂದು ಹರ್ಯಾಣ ಮುಖ್ಯಮಂತ್ರಿ ಎಂ ಎಲ್ ಖಟ್ಟಾರ್ ತಿಳಿಸಿದ್ದಾರೆ.

ಈ ಕುರಿತು ಎಎನ್ಐಗೆ ಪ್ರತಿಕ್ರಿಯೆ ನೀಡಿರುವ ಅವರು, ಕ್ರೀಡಾ ಇಲಾಖೆಯ ಬಳಿ ಸಂಬಂಧಪಟ್ಟ ದಾಖಲೆಗಳನ್ನು ಕೇಳಿದ್ದು ಮುಂದಿನ ಆದೇಶಗಳವರೆಗೆ ಅಧಿಸೂಚನೆಯನ್ನು ತಡೆಹಿಡಿಯಬೇಕೆಂದು ಸೂಚಿಸಿದ್ದೇನೆ ಎಂದರು.

ನಮ್ಮ ರಾಜ್ಯದ ವೃತ್ತಿಪರ ಕ್ರೀಡಾಪಟುಗಳು ಸಾಕಷ್ಟು ಕೊಡುಗೆ ನೀಡಿದ್ದು ಎಲ್ಲಾ ವಿಷಯಗಳ ಕುರಿತು ಪರಿಶೀಲನೆ ನಡೆಸುವುದಾಗಿ ನಾನು ಭರವಸೆ ನೀಡಿದ್ದೇನೆ ಎಂದರು.

ಹರ್ಯಾಣದಲ್ಲಿ ಖ್ಯಾತ ಕ್ರೀಡಾಪಟುಗಳಾದ ಬಾಕ್ಸರ್ ವಿಜೇಂದರ್ ಸಿಂಗ್, ಅಖಿಲ್ ಕುಮಾರ್ ಇದ್ದು ಇಬ್ಬರೂ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಡಿಎಸ್ ಪಿ ಆಗಿದ್ದಾರೆ. ಹಾಕಿ ತಂಡದ ನಾಯಕ ಸರ್ದಾರ್ ಸಿಂಗ್ ಮತ್ತು ಕುಸ್ತಿಪಟು ಗೀತಾ ಮತ್ತು ಬಬಿತಾ ಪೊಗಟ್ ಅವರು ಕೂಡ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರಲ್ಲಿ ಬಬಿತಾ ಕಾಮನ್ ವೆಲ್ತ್ ಗೇಮ್ ನ ಗೋಲ್ಡ್ ಕೋಸ್ಟ್ ಪಂದ್ಯದಲ್ಲಿ ಬೆಳ್ಳಿ ಪದಕ ಗಳಿಸಿದ್ದರು. ಸರ್ಕಾರದ ಈ ನಿರ್ಧಾರವನ್ನು ಅವರು ಅಸಹ್ಯಕರ ಎಂದು ಕರೆದಿದ್ದರು.

ಸರ್ಕಾರದ ಅಧಿಸೂಚನೆ ಕ್ರೀಡಾಪಟುವಿನ ತಯಾರಿ ಮೇಲೆ ಹೊಡೆತ ನೀಡುತ್ತದೆ. ಸರ್ಕಾರ ಇಂತಹ ಆದೇಶ ತರಲು ಹೇಗೆ ಸಾಧ್ಯ? ನಮ್ಮ ಆದಾಯದಲ್ಲಿ ಒಂದಷ್ಟು ಹಣವನ್ನು ತೆರಿಗೆ ರೂಪದಲ್ಲಿ ಕಟ್ಟುತ್ತೇವೆ. ಇದೀಗ ಆದಾಯದಲ್ಲಿ ಮೂರನೇ ಒಂದು ಭಾಗ ನೀಡಬೇಕೆಂದು ಕೇಳುವುದು ಸರಿಯಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ

ಕುರ್ಚಿ ಕದನ: ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ನಡೆದ ಚರ್ಚೆ ಏನು?

' ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ, ನನ್ನ ಇತಿಮಿತಿ ತಿಳಿದಿದೆ- DKS ಸೈಲೆಂಟ್ ಗುಟ್ಟೇನು?

ಆತ್ಮ ನಿರ್ಭರತೆಯೆಡೆಗೆ ಮಹತ್ವದ ಮೈಲಿಗಲ್ಲು; ಕರ್ನಾಟಕ ಮೂಲದ ಸ್ಟಾರ್ಟ್ ಅಪ್ ನಿಂದ ಮೊದಲ ದೇಶೀಯ ರಕ್ಷಣಾ AI ತಂತ್ರಜ್ಞಾನ ಅಭಿವೃದ್ಧಿ!

ಶಿವಮೊಗ್ಗ: ಪಠ್ಯ ಪುಸ್ತಕಗಳಲ್ಲಿ 'ಭಗವದ್ಗೀತೆ' ಸೇರಿಸಲು ಕೇಂದ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ!

SCROLL FOR NEXT