ಪಾತಕಿಗಳಿದ್ದ ಕಾರು 
ದೇಶ

ದೆಹಲಿ: ಪೊಲೀಸ್ ಎನ್ ಕೌಂಟರ್ ಗೆ 4 ಶಂಕಿತ ಭೂಗತ ಪಾತಕಿಗಳ ಸಾವು!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಪೊಲೀಸರು ಭೀಕರ ಎನ್ ಕೌಂಟರ್ ಮಾಡಿದ್ದು, ಘಟನೆಯಲ್ಲಿ ಶಂಕಿತ 4 ಮಂದಿ ಭೂಗತ ಪಾತಕಿಗಳು ಹತರಾಗಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಪೊಲೀಸರು ಭೀಕರ ಎನ್ ಕೌಂಟರ್ ಮಾಡಿದ್ದು, ಘಟನೆಯಲ್ಲಿ ಶಂಕಿತ 4 ಮಂದಿ ಭೂಗತ ಪಾತಕಿಗಳು ಹತರಾಗಿದ್ದಾರೆ.
ದಕ್ಷಿಣ ದೆಹಲಿಯ ಚತಾರ್ ಪುರ ಪ್ರದೇಶದಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕದ ಸಿಬ್ಬಂದಿ ಈ ಎನ್ ಕೌಂಟರ್ ಮಾಡಿದ್ದು, ಈ ವೇಳೆ ನಾಲ್ಕು ಮಂದಿ ಶಂಕಿತ ಭೂಗತ ಪಾತಕಿಗಳು ಹತರಾಗಿದ್ದಾರೆ. ಅಂತೆಯೇ ಮೂವರು ಪೊಲೀಸರಿಗೂ ಘಟನೆಯಲ್ಲಿ ಗಾಯವಾಗಿದೆ ಎಂದು ತಿಳಿದುಬಂದಿದೆ. 
ಇನ್ನು ಪೊಲೀಸ್ ಎನ್ ಕೌಂಟರ್ ನಲ್ಲಿ ಹತರಾದ ಶಂಕಿತರು ಭೂಗತ ಪಾತಕಿ ರಾಜೇಶ್ ಭಾರ್ತಿ ಗ್ಯಾಂಗ್ ನವರು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಂತೆಯೇ ಪ್ರಸ್ತುತ ಹತರಾದ ಶಂಕಿತ ಪಾತಗಳ ಮೇಲೆ ಪೊಲೀಸ್ ಇಲಾಖೆ ನಗದು ಬಹುಮಾನ ಘೋಷಣೆ ಮಾಡಿತ್ತು. ಇನ್ನು ಭೂಗತ ಪಾತಕಿ ರಾಜೇಶ್ ಭಾರ್ತಿ ವಿರುದ್ಧ ಕೊಲೆ, ಸುಲಿಗೆ, ಬೆದರಿಕೆ ಸೇರಿದಂತೆ  ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT