ನವದೆಹಲಿ: ಎಐಸಿಸಿ ಎರಡು ವರ್ಷಗಳ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಜೂನ್ 13ರಂದು ಇಫ್ತಾರ್ ಕೂಟ ಏರ್ಪಡಿಸಿದ್ದು, ಪ್ರತಿಪಕ್ಷಗಳ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.
ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಗೊಂಡ ನಂತರ ಆಯೋಜಿಸಿದ ಮೊದಲ ಇಫ್ತಾರ್ ಕೂಟ ಇದಾಗಿದ್ದು, ಜೂನ್ 13ರಂದು ದೆಹಲಿಯ ತಾಜ್ ಪ್ಯಾಲೆಸ್ ಹೋಟೆಲ್ ನಲ್ಲಿ ಇಫ್ತಾರ್ ಕೂಟ ಏರ್ಪಾಡು ಮಾಡಲಾಗಿದೆ ಎಂದು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನದೀಮ್ ಜಾವೇದ್ ಅವರು ತಿಳಿಸಿದ್ದಾರೆ.
ಪ್ರತಿಪಕ್ಷಗಳ ನಾಯಕರು ಸೇರಿದಂತೆ ಕಾಂಗ್ರೆಸ್ ನ ಎಲ್ಲಾ ನಾಯಕರುಗಳನ್ನು ಹಾಗೂ ಕೆಲವು ಹಿರಿಯ ಅಧಿಕಾರಿಗಳನ್ನು ಇಫ್ತಾರ್ ಕೂಟಕ್ಕೆ ಆಹ್ವಾನಿಸಲಾಗಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು 2015ರಲ್ಲಿ ಇಫ್ತಾರ್ ಕೂಟವನ್ನು ಏರ್ಪಾಡು ಮಾಡಿದ್ದರು.
2016ಕ್ಕಿಂತ ಮುಂಚೆ ಕಾಂಗ್ರೆಸ್ ಇಫ್ತಾರ್ ಕೂಟವನ್ನು ಏರ್ಪಾಡು ಮಾಡುತ್ತಿತ್ತು. ಅಧಿಕಾರದಲ್ಲಿದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಏರ್ಪಾಡು ಮಾಡುತ್ತಿದ್ದರು. ವಿರೋಧ ಪಕ್ಷದಲ್ಲಿದ್ದಾಗ ಸೋನಿಯಾ ಗಾಂಧಿಯವರು ಏರ್ಪಾಡು ಮಾಡಿದ್ದರು.
2016ರಲ್ಲಿ ಇಫ್ತಾರ್ ಕೂಟವನ್ನು ಆಯೋಜನೆ ಮಾಡುವುದಿಲ್ಲ ಅದರ ಬದಲು ಬಡವರಿಗೆ ರೇಷನ್ ಕೊಡುತ್ತೇವೆ ಎಂದು ಸೋನಿಯಾ ಗಾಂಧಿ ಹೇಳಿದ್ದರು. ಈ ಹಿಂದೆಯೂ ಕೆಲವು ಬಾರಿ ದೇಶದಲ್ಲಿ ಬರ ಅಥವಾ ನೈಸರ್ಗಿಕ ವಿಕೋಪ ಸಂಭವಿಸಿದಾಗ ಕಾಂಗ್ರೆಸ್ ಇಫ್ತಾರ್ ಕೂಟ ಆಯೋಜನೆ ಮಾಡಿರಲಿಲ್ಲ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos