ಸಂಗ್ರಹ ಚಿತ್ರ 
ದೇಶ

ಕರ್ನಾಟಕದ ಧರ್ಮಸ್ಥಳ ನೋಡಿ ಕಲೀರಿ; ಪುರಿ ದೇಗುಲ ಆಡಳಿತ ಮಂಡಳಿಗೆ 'ಸುಪ್ರೀಂ' ತರಾಟೆ

ದೇವಸ್ಥಾನ ನಿರ್ವಹಣೆ ವಿಚಾರದಲ್ಲಿ ಕರ್ನಾಟಕದ ಧರ್ಮಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜನನ್ನಾಥ ದೇಗುಲ ಆಡಳಿತ ಮಂಡಳಿಯನ್ನು ಸುಪ್ರೀಂಕೋರ್ಟ್ ಶನಿವಾರ ತರಾಟೆಗೆ ತೆಗೆದುಕೊಂಡಿದೆ...

ನವದೆಹಲಿ; ದೇವಸ್ಥಾನ ನಿರ್ವಹಣೆ ವಿಚಾರದಲ್ಲಿ ಕರ್ನಾಟಕದ ಧರ್ಮಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜನನ್ನಾಥ ದೇಗುಲ ಆಡಳಿತ ಮಂಡಳಿಯನ್ನು ಸುಪ್ರೀಂಕೋರ್ಟ್ ಶನಿವಾರ ತರಾಟೆಗೆ ತೆಗೆದುಕೊಂಡಿದೆ. 
ದೇವಾಲಯದಲ್ಲಿ ಭಕ್ತರ ಶೋಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾ.ಆದರ್ಶ ಗೋಯಲ್ ಮತ್ತು ನ್ಯಾ.ಆಸೋಕ್ ಭೂಷಣ್ ಅವರಿದ್ದ ಪೀಠ ದೇಗುಲ ನಿರ್ವಹಣೆಗೆ ಸಂಬಂಧಿಸಿದಂತೆ ಪುರಿ ಜಗನ್ನಾಥ ದೇಗುಲ ಆಡಳಿತ ಮಂಡಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. 
ಕರ್ನಾಟಕದ ಧರ್ಮಸ್ಥಳ ದೇವಸ್ಥಾನ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೇ ದೇವಿ, ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದ ನಿರ್ವಹಣೆ ವ್ಯವಸ್ಥೆಯನ್ನು ಅಧ್ಯಯನ ನಡೆಸುವಂತೆ ಒಡಿಶಾ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ. 
ಮುಂದಿನ ತಿಂಗಳು ನಡೆಯಲಿರುವ ವಾರ್ಷಿಕ ರಥಯಾತ್ರೆಗೂ ಮುನ್ನಾ ನ್ಯಾಯಾಲಯ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಈ ಆದೇಶ ಮಹತ್ವವನ್ನು ಪಡೆದಿದೆ. 
ಪುರಿ ಜಗನ್ನಾಥ ದೇವಸ್ಥಾನದ ಸಿಬ್ಬಂದಿಯಿಂದ ಭಕ್ತರ ಶೋಷಣೆ ನಡೆಯುತ್ತಿರುವುದರ ಬಗ್ಗೆ ಗಮನ ಸೆಳೆದ ಮೃನಾಲಿನಿ ಎಂಬುವವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT