ಸಂಗ್ರಹ ಚಿತ್ರ 
ದೇಶ

ಕರ್ನಾಟಕದ ಧರ್ಮಸ್ಥಳ ನೋಡಿ ಕಲೀರಿ; ಪುರಿ ದೇಗುಲ ಆಡಳಿತ ಮಂಡಳಿಗೆ 'ಸುಪ್ರೀಂ' ತರಾಟೆ

ದೇವಸ್ಥಾನ ನಿರ್ವಹಣೆ ವಿಚಾರದಲ್ಲಿ ಕರ್ನಾಟಕದ ಧರ್ಮಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜನನ್ನಾಥ ದೇಗುಲ ಆಡಳಿತ ಮಂಡಳಿಯನ್ನು ಸುಪ್ರೀಂಕೋರ್ಟ್ ಶನಿವಾರ ತರಾಟೆಗೆ ತೆಗೆದುಕೊಂಡಿದೆ...

ನವದೆಹಲಿ; ದೇವಸ್ಥಾನ ನಿರ್ವಹಣೆ ವಿಚಾರದಲ್ಲಿ ಕರ್ನಾಟಕದ ಧರ್ಮಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜನನ್ನಾಥ ದೇಗುಲ ಆಡಳಿತ ಮಂಡಳಿಯನ್ನು ಸುಪ್ರೀಂಕೋರ್ಟ್ ಶನಿವಾರ ತರಾಟೆಗೆ ತೆಗೆದುಕೊಂಡಿದೆ. 
ದೇವಾಲಯದಲ್ಲಿ ಭಕ್ತರ ಶೋಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾ.ಆದರ್ಶ ಗೋಯಲ್ ಮತ್ತು ನ್ಯಾ.ಆಸೋಕ್ ಭೂಷಣ್ ಅವರಿದ್ದ ಪೀಠ ದೇಗುಲ ನಿರ್ವಹಣೆಗೆ ಸಂಬಂಧಿಸಿದಂತೆ ಪುರಿ ಜಗನ್ನಾಥ ದೇಗುಲ ಆಡಳಿತ ಮಂಡಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. 
ಕರ್ನಾಟಕದ ಧರ್ಮಸ್ಥಳ ದೇವಸ್ಥಾನ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೇ ದೇವಿ, ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದ ನಿರ್ವಹಣೆ ವ್ಯವಸ್ಥೆಯನ್ನು ಅಧ್ಯಯನ ನಡೆಸುವಂತೆ ಒಡಿಶಾ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ. 
ಮುಂದಿನ ತಿಂಗಳು ನಡೆಯಲಿರುವ ವಾರ್ಷಿಕ ರಥಯಾತ್ರೆಗೂ ಮುನ್ನಾ ನ್ಯಾಯಾಲಯ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಈ ಆದೇಶ ಮಹತ್ವವನ್ನು ಪಡೆದಿದೆ. 
ಪುರಿ ಜಗನ್ನಾಥ ದೇವಸ್ಥಾನದ ಸಿಬ್ಬಂದಿಯಿಂದ ಭಕ್ತರ ಶೋಷಣೆ ನಡೆಯುತ್ತಿರುವುದರ ಬಗ್ಗೆ ಗಮನ ಸೆಳೆದ ಮೃನಾಲಿನಿ ಎಂಬುವವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT