ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶದ ಸುಲ್ತಾನ್ ಪುರದಲ್ಲಿ ಸಿಡಿಲು ಬಡಿದು ಐವರು ಸಾವು

ಉತ್ತರ ಪ್ರದೇಶದ ಸುಲ್ಲಾನ್ ಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಿಡಿಲು ಬಡಿದು ಐವರು ಮೃತಪಟ್ಟಿದ್ದಾರೆ ಮತ್ತು....

ಸುಲ್ತಾನ್ ಪುರ: ಉತ್ತರ ಪ್ರದೇಶದ ಸುಲ್ಲಾನ್ ಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಿಡಿಲು ಬಡಿದು ಐವರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಜೈಸಿಂಗ್ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಆಮ್ದೇವ ಗ್ರಾಮದಲ್ಲಿ ಮೂವರು ಮಕ್ಕಳು, ಸೂರಜ್(12), ಅಜಿತ್(15) ಹಾಗೂ ರವೀಂದ್ರ(14) ಆಟವಾಡುತ್ತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೆ ಓರ್ವ ಯುವಕ ಗಾಯಗೊಂಡಿದ್ದು, ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದೊಂಪುರ್ ಗ್ರಾಮದಲ್ಲಿ ಮನ್ಭವತಿ ಎಂಬ 42 ವರ್ಷ ಮಹಿಳೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. 
ಮತ್ತೊಂದು ಘಟನೆಯಲ್ಲಿ ಬನಿ ಗ್ರಾಮದಲ್ಲಿ 55 ವರ್ಷದ ಶೋಭಾವತಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಸಹ ಉತ್ತರ ಪ್ರದೇಶದ ಜೋನ್ಪರ್ ಮತ್ತು ರಾಯ್ ಬರೇಲಿ ಜಿಲ್ಲೆಯಲ್ಲಿ ಸಿಡಿಲಿಗೆ ಐವರು ಬಲಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT