ಮುಂಬೈ ಬಂದರು ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ 
ದೇಶ

ಮುಂಬೈ ಬಂದರು ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ಮುಂಬೈನ ಬಂದರು ಪ್ರದೇಶದ ಪಟೇಲ್ ಚೇಂಬರ್ಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸುವಲ್ಲಿ ನಿರತರಾಗಿದ್ದ ಇಬ್ಬರು ಅಗ್ನಿಶಾಮಕ ದಳ ಸಿಬ್ಬಂದಿಗಳು ಏಣಿಯಿಂದ ಬಿದ್ದು ಗಾಯಗೊಂಡಿದ್ದಾರೆ.

ಮುಂಬೈ: ಮುಂಬೈನ ಬಂದರು ಪ್ರದೇಶದ  ಪಟೇಲ್ ಚೇಂಬರ್ಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸುವಲ್ಲಿ ನಿರತರಾಗಿದ್ದ ಇಬ್ಬರು ಅಗ್ನಿಶಾಮಕ ದಳ ಸಿಬ್ಬಂದಿಗಳು ಏಣಿಯಿಂದ ಬಿದ್ದು ಗಾಯಗೊಂಡಿದ್ದಾರೆ.
ಕಟ್ಟಡದ ಒಂದು ಭಾಗ ಕುಸಿದ ಪರಿಣಾಮ ಅಗ್ನಿಶಾಮಕ ಅಧಿಕಾರಿಗಳು ಸಹ ಗಾಯಗೊಂಡಿದ್ದಾರೆ. ಸಧ್ಯ ಕನಿಷ್ಟ 18 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಬೆಂಕಿ ಆರಿಸುವಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.
ಜನನಿಬಿಡ ಪ್ರದೇಶದ ಪಕ್ಕದಲ್ಲೇ ಇದ್ದ ಈ ಕಟ್ಟಡ ಬೆಂಕಿ ಅನಾಹುತದಿಂದ ಸಂಪೂರ್ಣ ಹಾನಿಗೊಂಡಿದ್ದು ಕಟ್ಟಡದ ಒಂದು ಭಾಗ ಕುಸಿದ ಕಾರಣ ಜನ ಸಂಚಾರಕ್ಕೂ ಅಡಚಣೆಯಾಗಿದೆ. 
ಬ್ರಿಟೀಷರ ಕಾಲದ ಕಟ್ಟಡವಿದಾಗಿದ್ದು ಅತ್ಯಂತ ಅಪಾಯಕಾರಿ ಕಟ್ಟಡ ವರ್ಗಕ್ಕೆ ಸೇರಿದ್ದ ಇದನ್ನು ಕೆಡವಿ ಹಾಕಲು ನಿರ್ಧರಿಸಲಾಗಿತ್ತು. 
ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ವರದಿಯಾಗಿದ್ದು ಹೆಚ್ಚಿನ ವಿವರ್ಗಳನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT