ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಅರುಣ್ ಜೇಟ್ಲಿ 
ದೇಶ

ಎನ್'ಡಿಎ ವಿರುದ್ಧ ಕೆಲ ರಾಜಕೀಯ ಪಕ್ಷಗಳು ಮವೋವಾದಿಗಳನ್ನು ಬಳಸಿಕೊಳ್ಳುತ್ತಿವೆ: ಜೇಟ್ಲಿ

ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷದ ವಿರುದ್ಧ ಕೆಲ ರಾಜಕೀಯ ಪಕ್ಷಗಳು ಮಾವೋವಾದಿಗಳನ್ನು ಬಳಕೆ ಮಾಡಿಕೊಳ್ಳುತ್ತಿವೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಅರುಣ್ ಜೇಟ್ಲಿಯವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ಕೇಂದ್ರದ ಆಡಳಿತಾರೂಢ ಎನ್'ಡಿಎ ಪಕ್ಷದ ವಿರುದ್ಧ ಕೆಲ ರಾಜಕೀಯ ಪಕ್ಷಗಳು ಮಾವೋವಾದಿಗಳನ್ನು ಬಳಕೆ ಮಾಡಿಕೊಳ್ಳುತ್ತಿವೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಅರುಣ್ ಜೇಟ್ಲಿಯವರು ಶುಕ್ರವಾರ ಹೇಳಿದ್ದಾರೆ. 
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಪೊಲೀಸರು ಕೆಲ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದು, ತನಿಖೆ ವೇಳೆ ಮಾವೋವಾದಿಗಳು ಪ್ರಧಾನಿ ಮೋದಿಗೆ ಹತ್ಯೆಗೆ ಸಂಚು ರೂಪಿಸಿದ್ದಾರೆಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿತ್ತು. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಜೇಟ್ಲಿಯವರು, ದೇಶದಲ್ಲಿ ಮಾವೋವಾದಿಗಳ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಇದು ದೇಶಕ್ಕೆ ಅಪಾಯಕಾರಿಯಾಗಿದೆ. ಈ ಬಗ್ಗೆ ರಾಜಕೀಯ ಪಕ್ಷಗಳು ಮನವರಿಕೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ. 
ಸಂವಿಧಾನಾತ್ಮಕ ವ್ಯವಸ್ಥೆಯನ್ನು ಹಿಂಸಾತ್ಮಕವಾಗಿ ಉರುಳಿಸಲು ಮಾವೋವಾದಿಗಳು ಯತ್ನಿಸುತ್ತಿದ್ದಾರೆ. ತಾವು ಗ್ರಹಿಸಿದಂತಹ ವ್ಯವಸ್ಥೆಯಲ್ಲಿ ಮೂಲಭೂತ ಹಕ್ಕಿಗಳು, ಕಾನೂನು, ವಾಕ್ ಸ್ವಾತಂತ್ರ್ಯಕ್ಕೆ ಯಾವುದೇ ಜಾಗವಿರುವುದಿಲ್ಲ. ಇಂತಹ ಸಂಘಟನೆಗಳಿಗೆ ಬೆಂಬಲ ನೀಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT