ಸಂಗ್ರಹ ಚಿತ್ರ 
ದೇಶ

ಪ್ರಣಬ್ ರನ್ನು ಪ್ರಧಾನಿ ಅಭ್ಯರ್ಥಿ ಮಾಡಲು ಆರ್ ಎಸ್ಎಸ್ ಚಿಂತನೆ ನಡೆಸುತ್ತಿರುವಂತಿದೆ: ಶಿವಸೇನೆ

2019ರ ಲೋಕಸಭಾ ಚುನಾವಣೆಯಲ್ಲಿ ಆರ್ ಎಸ್ ಎಸ್ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿಸಲು ಆರ್ ಎಸ್ಎಸ್ ಚಿಂತನೆ ನಡೆಸುತ್ತಿರುವಂತಿದೆ ಎಂದು ಶಿವಸೇನೆ ಹೇಳಿದೆ.

ಮುಂಬೈ: 2019ರ ಲೋಕಸಭಾ ಚುನಾವಣೆಯಲ್ಲಿ ಆರ್ ಎಸ್ ಎಸ್ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿಸಲು ಆರ್ ಎಸ್ಎಸ್ ಚಿಂತನೆ ನಡೆಸುತ್ತಿರುವಂತಿದೆ ಎಂದು ಶಿವಸೇನೆ ಹೇಳಿದೆ.
ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಅಂಕಣ ಪ್ರಕಟಿಸಲಾಗಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ಕಡಿಮೆ ಇದೆ.  ಬಿಜೆಪಿ ಏನಾದರೂ ಅಧಿಕಾರಕ್ಕೆ ಬರುವಲ್ಲಿ ವಿಫಲವಾದರೆ ಪ್ರಣಬ್‌ ಮುಖರ್ಜಿರನ್ನು ಪ್ರಧಾನ ಮಂತ್ರಿ  ಅಭ್ಯರ್ಥಿಯಾಗಿ ಮುನ್ನಲೆಗೆ ತರಲು ಆರ್‌ಎಸ್‌ಎಸ್‌ ತಂತ್ರಗಾರಿಕೆ ಹೆಣೆಯುತ್ತಿದೆ ಎಂದು ಶಿವಸೇನೆ ಹೇಳಿದೆ.
'ನಾಗಪುರಕ್ಕೆ ಪ್ರಣಬ್‌ರನ್ನು ಆಹ್ವಾನಿಸುವ ಹಿಂದೆ ಈ ರೀತಿಯ ಆಲೋಚನೆ ಆರ್‌ಎಸ್ಎಸ್‌ಗೆ ಇರಬಹುದು. ದೇಶವನ್ನು ಪ್ರೀತಿಸಿ, ವೈವಿಧ್ಯತೆಯನ್ನು ಗೌರವಿಸಿ, ಸೌಹಾರ್ದತೆಯಲ್ಲಿ ಬದುಕಿ ಎಂದು ಮುಖರ್ಜಿ ಹೇಳಿದ ಮಾತಿಗೆ ಆರ್‌ಎಸ್‌ಎಸ್‌ ಕರತಾಡನ ವ್ಯಕ್ತಪಡಿಸಿದೆ' ಎಂದು ಸಾಮ್ನಾದಲ್ಲಿ ಹೇಳಲಾಗಿದೆ.
ಅಂತೆಯೇ ಈ ಹಿಂದೆ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ನ್ಯಾಯಾಂಗದ ವಿರುದ್ಧ ನ್ಯಾಯಾಧೀಶರ ಅಸಮಾಧಾನ ಹಾಗೂ ಹಣದುಬ್ಬರ ವಿಚಾರವಾಗಿ ಪ್ರಣಬ್‌ ಮುಖರ್ಜಿ ಯಾವುದೇ ಮಾತನಾಡಲಿಲ್ಲ. ಕಾಂಗ್ರೆಸ್‌ ನಾಯಕರು ಹಾಗೂ ಆರ್‌ಎಸ್‌ಎಸ್‌ ನಡುವಿನ ಹೊಸ ಅವಿನಾಭಾವ ಸಂಬಂಧದ ಸ್ವಾರಸ್ಯ 2019ರ ಚುನಾವಣೆ ಬಳಿಕವೇ ಗೊತ್ತಾಗಲಿದೆ ಎಂದು ಶಿವಸೇನಾ ವ್ಯಂಗ್ಯ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT