ಸಂಗ್ರಹ ಚಿತ್ರ 
ದೇಶ

ಉಗ್ರರ ಹೆಡೆ ಮುರಿ ಕಟ್ಟಿದ ಭಾರತೀಯ ಸೇನೆ, ಗಡಿದಾಟಲು ಯತ್ನಿಸಿದ 6 ಉಗ್ರರ ಸಾವು!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ 6 ಉಗ್ರರನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ 6 ಉಗ್ರರನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ.
ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ ನಲ್ಲಿ ಇಂದು ಮುಂಜಾನೆ ಪಾಕಿಸ್ತಾನ ಗಡಿಯಿಂದ ಮೂವರು ಉಗ್ರರು ಭಾರತದ ಗಡಿಯೊಳಗೆ ನುಸುಳುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಸೇನೆಯ ಸಿಬ್ಬಂದಿ ಇದನ್ನು ಗಮನಿಸಿ ಕೂಡಲೇ ಗುಂಡು ಹಾರಿಸಿದ್ದಾರೆ. ಉಗ್ರರು ಕೂಡ ಪ್ರತಿದಾಳಿ ಮಾಡಿದ್ದು, ಕೂಡಲೇ ಯೋಧರು ಸುತ್ತುವರೆದು ಗುಂಡಿನ ದಾಳಿ ಆರಂಭಿಸಿದ್ದಾರೆ. 
ಯೋಧರ ಗುಂಡಿನ ದಾಳಿಯಲ್ಲಿ 6 ಉಗ್ರರು ಹತರಾಗಿದ್ದು, ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಶಂಕೆ ಇದ್ದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿದೆ. ಈಗಲೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಗುಂಡಿನ ದಾಳಿ ವೇಳೆ ಸೈನಿಕರಿಗೆ ಗಾಯಗಳಾದ ಕುರಿತು ಮಾಹಿತಿ ಲಭ್ಯವಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT