ಕಪಿಲ್ ಮಿಶ್ರಾ 
ದೇಶ

ವಿಧಾನಸಭೆಯಲ್ಲಿ ಕಡಿಮೆ ಹಾಜರಾತಿ; ಕೇಜ್ರಿವಾಲ್ ವಿರುದ್ಧ ಪ್ರಕರಣಕ್ಕೆ ಕಪಿಲ್ ಮಿಶ್ರಾಗೆ 'ಹೈ' ಅನುಮತಿ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಕಡಿಮೆ ಹಾಜರಾತಿ ಹೊಂದಿದ್ದಾರೆಂದು ಗಂಭೀರ ಆರೋಪ ಮಾಡಿದ್ದ ಆಮ್ ಆದ್ಮಿ ಪಕ್ಷದ ಉಚ್ಛಾಟಿತ ಮುಖಂಡ ಕಪಿಲ್ ಮಿಶ್ರಾ ಅವರು ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಲು ದೆಹಲಿ ನ್ಯಾಯಾಲಯ...

ನವದೆಹಲಿ; ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಕಡಿಮೆ ಹಾಜರಾತಿ ಹೊಂದಿದ್ದಾರೆಂದು ಗಂಭೀರ ಆರೋಪ ಮಾಡಿದ್ದ ಆಮ್ ಆದ್ಮಿ ಪಕ್ಷದ ಉಚ್ಛಾಟಿತ ಮುಖಂಡ ಕಪಿಲ್ ಮಿಶ್ರಾ ಅವರು ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಲು ದೆಹಲಿ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ. 
ಈ ಹಿಂದೆ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕಪಿಲ್ ಮಿಶ್ರಾ ಅವರು, ವಿಧಾನಸಭೆಯಲ್ಲಿ ಕೇಜ್ರಿಲವಾಲ್ ಅವರು, ಶೇ.10ಕ್ಕಿಂತಲೂ ಕಡಿಮೆ ಹಾಜರಾತಿಯನ್ನು ಹೊಂದಿದ್ದಾರೆಂದು ಆರೋಪ ಮಾಡಿದ್ದರು. 
ಈ ಕುರಿತಂತೆ ದೆಹಲಿ ನ್ಯಾಯಾಲಯದಲ್ಲಿ ಅರ್ಜಿಯೊಂದರನ್ನು ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ಜೂನ್.12ರಂದು ನಡೆಸುವುದಾಗಿ ನ್ಯಾಯಾಲಯದ ತಿಳಿಸಿದ್ದು, ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಿದೆ. 
ನ್ಯಾಯಾಲಯದ ಅನುಮತಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಪಿಲ್ ಮಿಶ್ರಾ ಅವರು, ದೆಹಲಿ ವಿಧಾನಸಭೆಯಲ್ಲಿ ನಡೆಯುವ ಅಧಿವೇಶನಗಳಿಗೆ ಹಾಜರಾಗುವಂತೆ ನ್ಯಾಯಾಲಯ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಬೇಕು. ಇದಲ್ಲದೆ, ರಾಜ್ಯಪಾಲರು ಹಾಗೂ ವಿಧಾನಸಭಾ ಸ್ಪೀಕರ್ ಗಳಿಗೂ ಸೂಚನೆ ನೀಡಿ, ಮುಖ್ಯಮಂತ್ರಿಗಳು ಅಧಿವೇಶನಕ್ಕೆ ಹಾಜರಾಗುವಂತೆ ಸೂಚಿಸಬೇಕೆಂದು ಹೇಳಿದ್ದಾರೆ. 
ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಶೇ.10ಕ್ಕಿಂತಲೂ ಕಡಿಮೆ ಹಾಜರಾತಿಯನ್ನು ಹೊಂದಿದ್ದಾರೆ. ವಿಶೇಷ ಅಧಿವೇಶನಗಳಿಗೂ ಹಾಜರಾಗುವುದಿಲ್ಲ. ಕೇವಲ 2 ಗಂಟೆಗಳ ಕಾಲ ಮಾತ್ರ ವಿಧಾನಸಭೆಯಲ್ಲಿರುತ್ತಾರೆ. ಇದು ಮತ ಹಾಕಿದ ದೆಹಲಿ ಜನತೆಗೆ ಅವಮಾನ ಮಾಡಿದಂತೆ. ಅಧಿವೇಶನಕ್ಕೆ ಕೇಜ್ರಿವಾಲ್ ಅವರು ಸರಿಯಾಗಿ ಹಾಜರಾಗದಿದ್ದರೆ, ಅವರ ವೇತನವನ್ನು ಕಡಿತಗೊಳಿಸಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT