ನೀರವ್ ಮೋದಿ(ಸಂಗ್ರಹ ಚಿತ್ರ) 
ದೇಶ

ರಾಜಕೀಯ ಆಶ್ರಯ ಕೋರಿ ನೀರವ್ ಮೋದಿ ಇಂಗ್ಲೆಂಡಿಗೆ ಪಲಾಯನ: ವರದಿ

ಶತಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತು ತಲೆಮರೆಸಿಕೊಂಡಿರುವ ನೀರವ್ ಮೋದಿ ಇಂಗ್ಲೆಂಡಿನಲ್ಲಿ ರಾಜಕೀಯ ಆಶ್ರಯದಲ್ಲಿ ಇದ್ದಾರೆ

ನವದೆಹಲಿ: ಶತಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತು ತಲೆಮರೆಸಿಕೊಂಡಿರುವ ನೀರವ್ ಮೋದಿ ಇಂಗ್ಲೆಂಡಿನಲ್ಲಿ ರಾಜಕೀಯ ಆಶ್ರಯದಲ್ಲಿ ಇದ್ದಾರೆ ಎಂದು ಫೈನಾನ್ಷಿಯಲ್ ಟೈಮ್ಸ್ ವರದಿ ಮಾಡಿದೆ. ಇದರ ಹಿಂದೆ ಭಾರತೀಯ ಮತ್ತು ಇಂಗ್ಲೆಂಡಿನ ಅಧಿಕಾರಿಗಳ ಕೈವಾಡವಿದೆ ಎಂದು ಪತ್ರಿಕೆ ವರದಿ ತಿಳಿಸಿದೆ.

ಆದರೆ ವೈಯಕ್ತಿಕ ಕೇಸುಗಳಿಗೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ ಒದಗಿಸುವುದಿಲ್ಲ ಎಂದು ಬ್ರಿಟನ್ ನ ಗೃಹ ಕಚೇರಿ ತಿಳಿಸಿದೆ. ಆದರೆ ಹೇಳಿಕೆ ಪಡೆಯಲು ನೀರವ್ ಮೋದಿ ರಾಯ್ಟರ್ಸ್ ಸುದ್ದಿ ಸಂಸ್ಥೆಯ ಸಂಪರ್ಕಕ್ಕೆ ಸಿಗಲಿಲ್ಲ ಎಂದು ಪತ್ರಿಕೆ ವರದಿ ಮಾಡಿದೆ.

ಭಾರತದ ಎರಡನೇ ಅತಿ ದೊಡ್ಡ ಸಾರ್ವಜನಿಕ ಉದ್ಯಮ ಬ್ಯಾಂಕು ಪಂಜಾಬ್ ನ್ಯಾಷನಲ್ ಬ್ಯಾಂಕು ಈ ವರ್ಷದ ಆರಂಭದಲ್ಲಿ ಇಬ್ಬರು ಖ್ಯಾತ ಉದ್ಯಮಿಗಳಾದ ನೀರವ್ ಮೋದಿ ಮತ್ತು ಅವರ ಮಾವ ಮೆಹುಲ್ ಚೋಕ್ಸಿ ಬೇರೆ ಭಾರತೀಯ ಬ್ಯಾಂಕುಗಳ ಸಾಗರೋತ್ತರ ಶಾಖೆಗಳ ಮೂಲಕ ಸುಮಾರು 2.2 ಶತಕೋಟಿ ಸಾಲವನ್ನು ಅಕ್ರಮವಾಗಿ ಪಡೆದಿದ್ದರು ಎಂಬ ಸ್ಫೋಟಕ ಮಾಹಿತಿ ಇಡೀ ಭಾರತೀಯ ಬ್ಯಾಂಕು ಉದ್ಯಮ ರಂಗವನ್ನು ತಲ್ಲಣಗೊಳಿಸಿತ್ತು.

ಈ ಪ್ರಕರಣ ಬೆಳಕಿಗೆ ಬಂದ ಬಳಿಕ ನೀರವ್ ಮೋದಿ ಲಂಡನ್ ಗೆ ಪಲಾಯನ ಮಾಡಿದ್ದು ಅಲ್ಲಿ ರಾಜಕೀಯ ಮುಖಂಡರ ಪ್ರಭಾವದಡಿಯಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತು ಫೈನಾನ್ಷಿಯಲ್ ಟೈಮ್ಸ್ ಭಾರತದ ವಿದೇಶಾಂಗ ವ್ಯವಹಾರಗಳ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ನೀರವ್ ಮೋದಿಗೆ ಗಡೀಪಾರು ಆದೇಶ ತರುವ ಮುನ್ನ ದೇಶದ ಜಾರಿ ನಿರ್ದೇಶನಾಲಯ ಸಂಸ್ಥೆಗಳು ತಮ್ಮನ್ನು ಸಂಪರ್ಕಿಸುವುದಕ್ಕೆ ಕಾಯುತ್ತಿದ್ದೇವೆ ಎಂದಿದ್ದಾರೆ. ಆದರೆ ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ವಿದೇಶಾಂಗ ವ್ಯವಹಾರಗಳ ಇಲಾಖೆ ಪ್ರತಿಕ್ರಿಯೆ ನೀಡಿಲ್ಲ.

ಭಾರತ ಈಗಾಗಲೇ ಮತ್ತೊಬ್ಬ ಉದ್ಯಮಿ ವಿಜಯ್ ಮಲ್ಯರನ್ನು ಗಡೀಪಾರು ಮಾಡಲು ಸಿದ್ದತೆ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT