ಸಂಗ್ರಹ ಚಿತ್ರ 
ದೇಶ

ಜೆಎನ್ ಯು ವಿದ್ಯಾರ್ಥಿ ಉಮರ್ ಖಲೀದ್ ಬಗ್ಗೆ ಆಲೋಚಿಸಿ: ನಿತಿನ್ ಗಡ್ಕರಿಗೆ ಶೆಹ್ಲಾ ರಷೀದ್ ತಿರುಗೇಟು

ತಳಬುಡವಿಲ್ಲದ ಮಾಧ್ಯಮ ವರದಿಯಿಂದ ಮುಗ್ಧ ಜೆಎನ್​ಯು ವಿದ್ಯಾರ್ಥಿ ಉಮರ್​ ಖಾಲಿದ್​ ಹಾಗೂ ಆತನ ತಂದೆಯ ಮೇಲೆ ಹಲ್ಲೆಯಾದಾಗ ಯಾರು ಎಚ್ಚರವಹಿಸಲಿಲ್ಲ.

ನವದೆಹಲಿ: ತಳಬುಡವಿಲ್ಲದ ಮಾಧ್ಯಮ ವರದಿಯಿಂದ ಮುಗ್ಧ ಜೆಎನ್​ಯು ವಿದ್ಯಾರ್ಥಿ ಉಮರ್​ ಖಾಲಿದ್​ ಹಾಗೂ ಆತನ ತಂದೆಯ ಮೇಲೆ ಹಲ್ಲೆಯಾದಾಗ ಯಾರು ಎಚ್ಚರವಹಿಸಲಿಲ್ಲ. ಈ ಬಗ್ಗೆ ಉತ್ತರಿಸಿ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆ ಶೆಹ್ಲಾ ರಶೀದ್ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಕಿಡಿಕಾರಿದ್ದಾರೆ.
ತಮ್ಮ ವಿರುದ್ಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕಾನೂನು ಕ್ರಮದ ಎಚ್ಚರಿಕೆ ನೀಡಿ ಟ್ವೀಟ್ ಮಾಡಿದ ಬೆನ್ನಲ್ಲೇ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದ ದೊಡ್ಡ ಪಕ್ಷದ ನಾಯಕರಾಗಿರುವವರು​ ವ್ಯಂಗ್ಯಭರಿತ ಮಾತಿನ ಬಗ್ಗೆ ಕಾರ್ಯಪ್ರವೃತ್ತರಾಗುತ್ತಾರೆ. ಆದರೆ, ತಳಬುಡವಿಲ್ಲದ ಮಾಧ್ಯಮ ವರದಿಯಿಂದ ಮುಗ್ಧ ಜೆಎನ್​ಯು ವಿದ್ಯಾರ್ಥಿ ಉಮರ್​ ಖಾಲಿದ್​ ಹಾಗೂ ಆತನ ತಂದೆಯ ಮೇಲೆ ಹಲ್ಲೆಯಾದಾಗ ಯಾರು ಎಚ್ಚರವಹಿಸಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇದಕ್ಕೂ ಮೊದಲು ಆರ್ ಎಸ್ಎಸ್ ಮತ್ತು ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ ಎಂದು ಶೆಹ್ಲಾ ರಷೀದ್ ವಿವಾದಾತ್ಮಕ ಟ್ವೀಟ್ ಮಾಡಿದ್ದರು. ಶನಿವಾರ ತಮ್ಮ ಟ್ವಿಟರ್​ನಲ್ಲಿ ಆರ್​ಎಸ್​ಎಸ್​ ಮತ್ತು ನಿತಿನ್ ಗಡ್ಕರಿ ಅವರನ್ನು ನೋಡಿದರೆ ಪ್ರಧಾನಿ ಮೋದಿ ಅವರನ್ನು ಕೊಲ್ಲಲು ಸಂಚು ರೂಪಿಸಿದವರಂತೆ ಕಾಣುತ್ತಾರೆ. ನಂತರ ಅದನ್ನು ಮುಸ್ಲಿಂ ಹಾಗೂ ಕಮ್ಯೂನಿಸ್ಟ್ ​ಗಳ ಮೇಲೆ ಹೊರಿಸಿ, ನಂತರ ಮುಸ್ಲಿಮರನ್ನು ರಾಜೀವ್​ ಗಾಂಧಿ ಹತ್ಯೆ ಮಾದರಿಯಲ್ಲಿ ಗಲ್ಲಿಗೇರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಶೆಹ್ಲಾ ರಶೀದ್ ಟ್ವೀಟ್​ ಮಾಡಿದ್ದರು.
ಈ ಟ್ವೀಟ್ ವ್ಯಾಪಕ ಸುದ್ದಿಗೆ ಗ್ರಾಸವಾದ ಬೆನ್ನಲ್ಲೇ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆ ಶೆಹ್ಲಾ ರಶೀದ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ. ಶೆಹ್ಲಾ ರಷೀದ್ ಅವರ ಟ್ವೀಟ್ ಆರೋಪಕ್ಕೆ ಟ್ವಿಟರ್ ನಲ್ಲೇ ಉತ್ತರ ನೀಡಿರುವ ಮೋದಿ ಹತ್ಯೆ ವಿಚಾರದಲ್ಲಿ ಸಮಾಜದ ವಿರುದ್ಧ ವಿಲಕ್ಷಣ ಕಾಮೆಂಟ್​ ಮಾಡಿರುವವರ ವಿರುದ್ಧ ಕಾನೂನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ