ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ 
ದೇಶ

ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಸ್ಥಿರವಾಗಿದೆ; ಏಮ್ಸ್ ಅಧಿಕೃತ ಹೇಳಿಕೆ

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿರವಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ಸಂಸ್ಥೆ ಸೋಮವಾರ ಹೇಳಿದೆ...

ನವದೆಹಲಿ; ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿರವಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ಸಂಸ್ಥೆ ಸೋಮವಾರ ಹೇಳಿದೆ. 
ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳುತ್ತಿರುವ ವಾಜಪೇಯಿಯವರು ಇಂದು ಬೆಳಿಗ್ಗೆಯಷ್ಟೇ ರಾಜಧಾನಿ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. 
ಇದೀಗ ವಾಜಪೇಯಿಯವರ ಆರೋಗ್ಯ ಕುರಿತಂತೆ ಅಧಿಕೃತ ಹೇಳಿಕೆ ನೀಡಿರುವ ಏಮ್ಸ್ ಅಧಿಕಾರಿಗಳು, ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿರವಾಗಿದೆ. ಡಾ.ರಣ್'ದೀಪ್ ಗುಲಾರಿಯಾ ನೇತೃತ್ವದ ವೈದ್ಯ ಸಮೂಹ ವಾಜಪೇಯಿಯವರ ಆರೋಗ್ಯ ಬಗ್ಗೆ ನಿಗಾವಹಿಸಿದ್ದಾರೆಂದು ಹೇಳಿದೆ. 
ಈ ಕುರಿತು ಮಾತನಾಡಿರುವ ಏಮ್ಸ್ ನಿರ್ದೇಶಕ, ವಾಜಪೇಟಿಯವರು ದೈನಂದಿನ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿಸಿದ್ದಾರೆ. 
ಮಧ್ಯಪ್ರದೇಶದ ಬ್ರಾಹ್ಮಣ ಕುಟುಂಬದಲ್ಲಿ ಕೃಷ್ಣ ಬಿಹಾರಿ ವಾಜಪೇಯಿ ಮತ್ತು ಕೃಷ್ಣ ದೇವಿ ದಂಪತಿಗಳ ಮಗನಾಗಿ ವಾಜಪೇಯಿಯವರು ಡಿಸೆಂಬರ್ 25. 1924ರಂದು ಗ್ವಾಲಿಯರ್ನಲ್ಲಿ ಜನಿಸಿದ್ದರು. 
ಹದಿಹರೆಯದ ವಯಸ್ಸಿನಲ್ಲಿಯೇ ಬ್ರಿಟೀಷರ ವಿರುದ್ಧ ಹೋರಾಡಿ ಜೈಲಿ ಸೇರಿದ್ದರು. ಬ್ರಿಟೀಷರ ವಿರುದ್ಧ ಹೋರಾಟದ ಹೊತ್ತಿನಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಜನ ಸಂಘದಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದರು. 
1942-1945 ರ ಕ್ವಿಟ್ ಇಂಡಿಯಾ ಚಳವಳಿಯ ಹೊತ್ತಲ್ಲಿ ವಾಜಪೇಯಿ ರಾಜಕೀಯಕ್ಕೆ ಧುಮುಕಿದ್ದರು. ಮೊದಲಿಗೆ ಕಮ್ಯುನಿಸ್ಟ್ ಆಗಿದ್ದ ಇವರು ಆಮೇಲೆ ಆರೆಸ್ಸೆಸ್ಸ್ ಸೇರಿದ್ದರು. 1957 ರಿಂದ 2009ರ ವರೆಗೆ ಲೋಕಸಭೆ, ಸಂಸತ್ನ ಕೆಳಮನೆಯಲ್ಲಿ ವಾಜಪೇಯಿ ಅವರು ಸೇವೆ ಸಲ್ಲಿಸಿದರು. 1998ರಲ್ಲಿ 13 ತಿಂಗಳುಗಳ ಕಾಲ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಎಐಎಡಿಎಂಕೆ ನೇತಾರೆ ಜೆ. ಜಯಲಲಿತಾ ಅವರ ಬೆಂಬಲ ವಾಪಸ್ ತೆಗೆದುಕೊಂಡಾಗ ಮತ್ತೆ ಬಿತ್ತು. 4 ದಶಕಗಳ ಕಾಲ ವಿಪಕ್ಷದಲ್ಲಿದ್ದ ಬಿಜೆಪಿ 1996ರಲ್ಲಿ ವಾಜಪೇಯಿ ನೇತೃತ್ವದಲ್ಲಿ ಅಧಿಕಾರಕ್ಕೇರಿತು. ಆದರೆ ಈ ಸರ್ಕಾರ 13 ದಿನಗಳ ಕಾಲವಷ್ಟೇ ಅಧಿಕಾರ ನಡೆಸಿತು. 1999ರಲ್ಲಿ ಮತ್ತೆ ವಾಜಪೇಯಿ ಸರ್ಕಾರ  ಅಧಿಕಾರಕ್ಕೇರಿ 5 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT