ಭಯ್ಯೂಜಿ ಮಹಾರಾಜ್ 
ದೇಶ

ಸ್ವಯಂಘೋಷಿತ ಧರ್ಮ ಗುರು ಭಯ್ಯೂಜಿ ಮಹಾರಾಜ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಸ್ವಯಂ ಘೋಷಿತ ದೇವಮಾನವ ಭಯ್ಯೂಜಿ ಮಹಾರಾಜ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ...

ಇಂದೋರ್: ಸ್ವಯಂ ಘೋಷಿತ ದೇವಮಾನವ ಭಯ್ಯೂಜಿ ಮಹಾರಾಜ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಗುಂಡು ಹಾರಿಸಿಕೊಂಡು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಬೈಯ್ಯಾಜಿ ಮಹಾರಾಜ್ ರನ್ನು ಕೂಡಲೇ ಬಾಂಬೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. 
ದೊಡ್ಡ ಪ್ರಮಾಣದಲ್ಲಿ ಅನುಯಾಯಿಗಳನ್ನು ಹೊಂದಿರುವ ಮಹಾರಾಜ್ 2016ರ ಏಪ್ರಿಲ್ ನಲ್ಲಿ ಸಾರ್ವಜನಿಕ ಜೀವನದಿಂದ ನಿವೃತ್ತಿ ಘೋಷಿಸಿದ್ದರು. ಕಳೆದ ವರ್ಷದ ಏಪ್ರಿಲ್ ನಲ್ಲಿ ಮಧ್ಯಪ್ರದೇಶ ಸರ್ಕಾರ ಅವರಿಗೆ ಸಚಿವರ ಸ್ಥಾನಮಾನ ನೀಡಿ ಗೌರವಿಸಿತ್ತು. 
ಭಯ್ಯಾಜಿ ಅವರ ಮೂಲ ಹೆಸರು ಉದಯಸಿನ್ಹ ದೇಶ್ ಮುಖ್. ಸ್ವಯಂಘೋಷಿತ ಮಾನವ ಎಂದು ಘೋಷಣೆ ನಂತರ ಅವರು ಭಯ್ಯೂಜಿ ಮಹಾರಾಜ್ ಎಂದೇ ಖ್ಯಾತರಾಗಿದ್ದರು. ಸದ್ಗುರು ದತ್ತ ಧಾರ್ಮಿಕ್ ಏವಂ ಪಾರಮಾರ್ಥಿಕ್ ಟ್ರಸ್ಟ್ ಮತ್ತು ಸೂರ್ಯೋದಯ ಆಶ್ರಮದಂತಹ ಸಂಸ್ಥೆಗಳ ಸ್ಥಾಪಕರಾಗಿದ್ದಾರೆ. 
2011ರಲ್ಲಿ ಅಣ್ಣಾ ಹಜಾರೆಯವರು ಲೋಕಪಾಲ ವಿಧೇಯಕಕ್ಕಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಘೋಷಿಸಿದಾಗ ಭಯ್ಯೂಜಿ ಮಹಾರಾಜ್ ದೇಶದ ಗಮನ ಸೆಳೆದಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT