ಹಲ್ಲೆಗೊಳಗಾದ ವ್ಯಕ್ತಿಯ ತಂದೆ 
ದೇಶ

ಜಾರ್ಖಂಡ್ :'ಜೈಶ್ರೀರಾಮ್' ಜಪಿಸುವಂತೆ ಮುಸ್ಲಿಂ ಧರ್ಮಗುರು ಮೇಲೆ ಹಲ್ಲೆ

ಮುಸ್ಲಿಂ ಧರ್ಮ ಗುರು ಒಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ. ...

ರಾಂಚಿ: ಮುಸ್ಲಿಂ ಧರ್ಮ ಗುರು ಒಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ. 
ಅಜರ್ ಉಲ್ ಇಸ್ಲಾಂ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ, ಸಂಜೆ ತಾವು ಪ್ರಾರ್ಥನೆ ಮುಗಿಸಿ ವಾಪಾಸಾಗುವಾಗ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದೆ ಎಂದು ಹೇಳಲಾಗಿದೆ.
ಅಜರ್ ಬಳಿ ಬಂದ ಗುಂಪೊಂದು ಜೈ ಶ್ರೀರಾಮ್ ಎಂದು ಮಂತ್ರ ಜಪಿಸುವಂತೆ ಹೇಳಿದೆ. ಆದರೆ ಅದಕ್ಕೊಪ್ಪದೇ ಇದ್ದ ಕಾರಣ ತಮ್ಮ ಮಗನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಅಜರ್ ತಂದೆ ಆರೋಪಿಸಿದ್ದಾರೆ. 
ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ತಲೆ, ಕೈ ಹಾಗೂ ಕಾಲು ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿವೆ. 
ಜೂನ್ ತಿಂಗಳ ಆರಂಭದಲ್ಲಿ ಗುಂಪೊಂದು ಹರ್ಯಾಣದ ಕರ್ನಾಲ್ ನ ಮಸೀದಿಯಲ್ಲಿ ನಮಾಜ್ ಮಾಡುವ ವೇಳೆ ದಾಳಿ ನಡೆಸಿ ಹಲವರ ಮೇಲೆ ಹಲ್ಲೆ ಮಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT