ಲೆಫ್ಟಿನೆಂಟ್ ಗೌರ್ನರ್ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ: ಆಪ್ ನಾಯಕರನ್ನು ತಡೆದ ಪೊಲೀಸರು 
ದೇಶ

ಲೆಫ್ಟಿನೆಂಟ್ ಗೌರ್ನರ್ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ: ಆಪ್ ನಾಯಕರನ್ನು ತಡೆದ ಪೊಲೀಸರು

ದೆಹಲಿ ಲೆಫ್ಟಿನೆಂಟ್ ಗೌರ್ನರ್ ನಿವಾಸದೆಡೆಗೆ ಪ್ರತಿಭಟನಾ ಮೆರವಣಿಗೆ ತೆರಳಿದ್ದ ಆಮ್ ಆದ್ಮಿ ಪಕ್ಷದ ನಾಯಕರನ್ನು ಪೊಲೀಸರು ತಡೆದಿದ್ದಾರೆ.

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗೌರ್ನರ್ ನಿವಾಸದೆಡೆಗೆ ಪ್ರತಿಭಟನಾ ಮೆರವಣಿಗೆ ತೆರಳಿದ್ದ ಆಮ್ ಆದ್ಮಿ ಪಕ್ಷದ ನಾಯಕರನ್ನು ಪೊಲೀಸರು ತಡೆದಿದ್ದಾರೆ. 
ಐಎಎಸ್  ಅಧಿಕಾರಿಗಳು ತಮ್ಮ ಮುಷ್ಕರ ನಿಲ್ಲಿಸುವಂತೆ ಗವರ್ನರ್ ನಿರ್ದೇಶನ ನೀಡಬೇಕು. ನಾಲ್ಕು ತಿಂಗಳಿನಿಂದ ಕೆಲಸ ಮಾಡದೆ ಅಡ್ಡಿಪಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಆಮ್ ಆದ್ಮಿ ಪಕ್ಷದ ನಾಯಕರು ದೆಹಲಿ ಲೆಫ್ಟಿನೆಂಟ್ ಗೌರ್ನರ್ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಸತತ ಮೂರನೇ ದಿನವೂ ಮುಂದುವರೆದಿದ್ದು, ಜೂ.13 ರಂದು ಲೆಫ್ಟಿನೆಂಟ್ ಗೌರ್ನರ್ ನಿವಾಸದೆಡೆಗೆ ಆಪ್ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ್ದರು.  ಆದರೆ ಲೆಫ್ಟಿನೆಂಟ್ ಗೌರ್ನರ್ ನಿವಾಸದ ಮುಂಭಾಗದಲ್ಲಿ ಆಮ್ ಆದ್ಮಿ ಪಕ್ಷದ ನಾಯಕರನ್ನು ಪೊಲೀಸರು ತಡೆದಿದ್ದಾರೆ. 
ಲೆಫ್ಟಿನೆಂಟ್ ಗೌರ್ನರ್ ನಿವಾಸದೆಡೆಗೆ ಆಮ್ ಆದ್ಮಿ ಪಕ್ಷದ ನಾಯಕರು ಪ್ರಾರಂಭಿಸಿದ್ದ ಪ್ರತಿಭಟನಾ ಮೆರವಣಿಗೆಗೆ ಮಾಜಿ ಕೇಂದ್ರ ಸಚಿವ, ಮಾಜಿ ಬಿಜೆಪಿ ನಾಯಕ ಯಶ್ವಂತ್ ಸಿನ್ಹಾ ಸಾಥ್ ನೀಡಿದ್ದರು. ದೆಹಲಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಮತ್ತು ಅವರ ಕ್ಯಾಬಿನೆಟ್ ಸಹೋದ್ಯೋಗಿಗಳು  ಲೆ.ಗವರ್ನರ್ ಕಛೇರಿಯಲ್ಲಿ ಇಡೀ ರಾತ್ರಿ ಪ್ರತಿಭಟನೆ ನಡೆಸಿದ್ದರು. ಆಮ್ ಆದ್ಮಿ ಪಕ್ಷದ ನಡೆಯನ್ನು ಬಿಜೆಪಿ ಖಂಡಿಸಿದ್ದು,  ದೆಹಲಿ ಸಿಎಂ ನಡೆ ಪ್ರಜಾಪ್ರಭುತ್ವದ ಅಣಕ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT