ಎಡಪ್ಪಾಡಿ ಪಳನಿಸ್ವಾಮಿ ಮತ್ತು ಒ ಪನ್ನೀರ್ ಸೆಲ್ವಂ 
ದೇಶ

ಎಐಎಡಿಎಂಕೆ ಶಾಸಕರ ಅನರ್ಹ ಪ್ರಕರಣ; ಮದ್ರಾಸ್ 'ಹೈ' ಭಿನ್ನ ತೀರ್ಪು, ಪಳನಿ ಸರ್ಕಾರಕ್ಕೆ ಬಿಗ್ ರಿಲೀಫ್

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನಲೆಯಲ್ಲಿ 16 ಎಐಎಡಿಎಂಕೆ ಶಾಸಕರನ್ನು ಉಚ್ಛಾಟನೆಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಭಿನ್ನ ತೀರ್ಪು ನೀಡಿದ್ದು, ಈ ಹಿನ್ನಲೆಯಲ್ಲಿ ಪಳನಿಸ್ವಾಮಿ ಸರ್ಕಾರಕ್ಕೆ ಬಿಗ್ ರಿಲೀಫ್ ದೊರಕಿದಂತಾಗಿದೆ...

ಚೆನ್ನೈ; ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನಲೆಯಲ್ಲಿ 16 ಎಐಎಡಿಎಂಕೆ ಶಾಸಕರನ್ನು ಉಚ್ಛಾಟನೆಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಭಿನ್ನ ತೀರ್ಪು ನೀಡಿದ್ದು, ಈ ಹಿನ್ನಲೆಯಲ್ಲಿ ಪಳನಿಸ್ವಾಮಿ ಸರ್ಕಾರಕ್ಕೆ ಬಿಗ್ ರಿಲೀಫ್ ದೊರಕಿದಂತಾಗಿದೆ. 
ಕಳೆದ ಆಗಸ್ಟ್ ತಿಂಗಳಿನಲ್ಲಿ ದಿನಕರನ್ ಬೆಂಬಲಕ್ಕೆ ನಿಂತಿದ್ದ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದರು. ಇದರಿಂಡ ಎಐಎಡಿಎಂಕೆ ಪಕ್ಷದ ವಿರುದ್ಧ ಶಾಸಕರು ನಡೆದುಕೊಂಡ ಹಿನ್ನಲೆಯಲ್ಲಿ ತಮಿಳುನಾಡು ವಿಧಾನಸಭೆ ಸ್ಪೀಕರ್ 16 ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು. 
ಸ್ಪೀಕರ್ ಅವರ ಈ ನಿಲುವನ್ನು ಖಂಡಿಸಿದ ಶಾಸಕರು, ಸಭಾಧ್ಯಕ್ಷ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.
ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಮದ್ರಾಸ್ ಹೈಕೋರ್ಟ್ ದ್ವಿಸದಸ್ಯ ಪೀಠ, ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದಿದೆ. ಆದರೆ, ಇಬ್ಬರು ನ್ಯಾಯಾಧೀಶರ ತೀರ್ಪಿನಲ್ಲಿ ಭಿನ್ನ ಆದೇಶ ಹೊರ ಬಂದಿರುವ ಹಿನ್ನಲೆಯಲ್ಲಿ ವಿಚಾರಣೆಯನ್ನು ಮೂರನೇ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ. 
ಮತ್ತೊಮ್ಮೆ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ತ್ರಿಸದಸ್ಯ ಪೀಠ ನೀಡುವ ತೀರ್ಪು ಅಂತಿಮವಾಗಲಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT