ಕೊಚ್ಚಿ: ಸರಕು ಸಾಗಣೆ ಹಡಗು ಬೆಂಕಿಗಾಹುತಿ: 22 ಸಿಬ್ಬಂದಿ ಅಪಾಯದಿಂದ ಪಾರು 
ದೇಶ

ಕೊಚ್ಚಿ: ಸರಕು ಸಾಗಣೆ ಹಡಗು ಬೆಂಕಿಗಾಹುತಿ: 22 ಸಿಬ್ಬಂದಿ ಅಪಾಯದಿಂದ ಪಾರು

ಎಂವಿ ಎಸ್ಎಸ್ಎಲ್ ಕೋಲ್ಕತ್ತಾ ಹೆಸರಿನ ಸ್ಥಳೀಯ ಸರಕು ಸಾಗಣೆ ಹಡಗೊಂದು ಬೆಂಕಿ ಅವಘಡಕ್ಕೆ ಈಡಾಗ ಘಟನೆ ಕೇರಳದ ಕೊಚ್ಚಿ ಸಮೀಪ ನಡೆದಿದೆ.

ಕೊಚ್ಚಿ(ಕೇರಳ): ಎಂವಿ ಎಸ್ಎಸ್ಎಲ್ ಕೋಲ್ಕತ್ತಾ ಹೆಸರಿನ ಸ್ಥಳೀಯ ಸರಕು ಸಾಗಣೆ ಹಡಗೊಂದು ಬೆಂಕಿ ಅವಘಡಕ್ಕೆ ಈಡಾದ ಘಟನೆ ಕೇರಳದ ಕೊಚ್ಚಿ ಸಮೀಪ ನಡೆದಿದೆ.
ಬೆಂಕಿ ಅವಘಡಕ್ಕೀಡಾದ ಹಡಗಿನಲ್ಲಿ ಸಿಬ್ಬಂದಿಗಳು ಸೇರಿ 22 ಮಂದಿ ಇದ್ದುದಾಗಿ ತಿಳಿದುಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಕರಾವಳಿ ರಕ್ಷಣಾ ಪಡೆ ಯೋಧರು ಅವಘಡಕ್ಕೀಡಾದ ಹಡಗಿನತ್ತ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಎಲ್ಲಾ 22 ಜನರನ್ನೂ ರಕ್ಷಿಸಲಾಗಿದೆ.
ನಾಪ್ತಾ’ ಎಂಬ ರಾಸಾಯನಿಕ ಟ್ಯಾಂಕರ್‌ ಅನ್ನು ಹೊತ್ತೊಯ್ಯುತ್ತಿದ್ದ  ಹಡಗಿನಲ್ಲಿ ಕಳೆದ ರಾತ್ರಿ ಸ್ಪೋಟದೊಡನೆ ಬೆಂಕಿ ಕಾಣಿಸಿದೆ. ಹೀಗೆ ಬೆಂಕಿ ಅವಘಡಕ್ಕೀಡಾದ ಮೂರು ತಾಸಿನಲ್ಲಿ ರಕ್ಷಣಾ ಪಡೆ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿದ್ದು ಸಧ್ಯ ಯಾವ್ಚ ಜೀವಹಾನಿ ಸಂಭವಿಸಲಿಲ್ಲ.
ಸಮುದ್ರದ ಭಾಗದಲ್ಲಿದ್ದ ಬಲವಾದ ಗಾಳಿಯ ಕಾರಣ ಬೆಂಕಿಯು ಬೇಗನೇ ಹರಡಿದ್ದು ಹಡಗಿನ ಶೇ.70 ಭಾಗ ಸುಟ್ಟು ಹೋಗಿದೆ ಎಂದು ಮೂಲಗಳು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

SCROLL FOR NEXT