ಹರ್ಷ ವರ್ಧನ್ 
ದೇಶ

ದೆಹಲಿ ವಾಯು ಗುಣಮಟ್ಟ ಶೀಘ್ರವೇ ಸುಧಾರಿಸಲಿದೆ: ಹರ್ಷವರ್ಧನ್

ದೆಹಲಿ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ವಾಯುವಿನ ಗುಣಮಟ್ಟ ಶೀಘ್ರವೇ ಸುಧಾರಿಸಲಿದೆ ಎಂದು ಕೇಂದ್ರ ಪರಿಸರ...

ನವದೆಹಲಿ: ದೆಹಲಿ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ  ವಾಯುವಿನ ಗುಣಮಟ್ಟ ಶೀಘ್ರವೇ ಸುಧಾರಿಸಲಿದೆ ಎಂದು  ಕೇಂದ್ರ ಪರಿಸರ ಸಚಿವ ಹರ್ಷವರ್ದನ್ ತಿಳಿಸಿದ್ದಾರೆ.ರಾಷ್ಟ್ರ ರಾಜಧಾನಿ  ದೆಹಲಿಯಲ್ಲಿ ಹೆಚ್ಚಿನ ವಾಯು ಮಾಲಿನ್ಯವಾಗಲೂ  ದೂಳು ಸಹಿತ ಬಿರುಗಾಳಿ ಕಾರಣ ಎಂದು ಆರೋಪಿಸಿದ್ದಾರೆ. 
ಧೂಳು ಸಹಿತ ಬಿರುಗಾಳಿಯಿಂದ ವಾಯುವಿನ ಗುಣಮಟ್ಟ ಹಾಳಾಗುತ್ತಿದೆ, ಈ ಸಂಬಂಧ ಪರಿಸರ ಇಲಾಖೆ ಮತ್ತು ಕಾರ್ಯಪಡೆ ಜೊತೆ ಸಭೆ ನಡೆಸಲಾಗಿದೆ. ಈ ಸಮಸ್ಯೆಗೊಳಗಾಗಿರುವ ರಾಜ್ಯ ಸರ್ಕಾರಗಳಿಗೆ ನಾವು ಹಲವು ಸಲಹೆ ನೀಡಿದ್ದೇವೆ, ಈ ವಾರಾಂತ್ಯದೊಳಗೆ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ,. ಮುಂದಿನ ಒಂದು ಎರಡು ದಿನಗಳಲ್ಲಿ  ಪರಿಸ್ಥಿತಿ ಸುಧಾರಿಸಲಿದೆ ಎಂದು ಹೇಳಿದ್ದಾರೆ.
ನಾಗರಿಕರು ಹೆಚ್ಚಿನ ಸಮಯ ಹೊರಗೆ ಕಳೆಯುವುದರ ಬದಲು ಮನೆಯ ಒಳಗೆ ಇರುವಂತೆ ಸೂಚಿಸಿದ್ದಾರೆ,  ರಾಜಧಾನಿ ದೆಹಲಿಯಲ್ಲಿ  ವಾಯುವಿನ ಗುಣಮಟ್ಟ ಅಪಾಯಕಾರಿ ಮಟ್ಟ ತಲುಪಿದೆ. ರಾಜಸ್ತಾನದಿಂದ ಬೀಸುತ್ತಿರುವ ಪ್ರಬಲ ಚಂಡಮಾರುತ ವಿರೋಧಿ ಗಾಳಿಯಿಂದಾಗಿ ದೆಹಲಿ ಗಾಳಿಯ ಗುಣಮಟ್ಟಕ್ಕೆ ಹಾಳಾಗಲು ಕಾರಣವಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT