ವಿ ನಾರಾಯಣಸ್ವಾಮಿ 
ದೇಶ

ಸರ್ಕಾರಗಳಲ್ಲಿ ದೆಹಲಿ, ಪುದುಚೇರಿ ಲೆ.ಗವರ್ನರ್ ಹಸ್ತಕ್ಷೇಪ: ನಾರಾಯಣಸ್ವಾಮಿ

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ವಿರುದ್ಧ ಆಪ್ ಸರ್ಕಾರ ಆಹೋ ರಾತ್ರಿ ಧರಣಿ ನಡೆಸಿದ ಬೆನ್ನಲ್ಲೇ ...

ಪುದುಚೇರಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ವಿರುದ್ಧ ಆಪ್ ಸರ್ಕಾರ ಆಹೋ ರಾತ್ರಿ ಧರಣಿ ನಡೆಸಿದ ಬೆನ್ನಲ್ಲೇ ಪದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ, ದೆಹಲಿ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಗಳು ಚುನಾಯಿತ ಸರ್ಕಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಚಿವರು ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಧರಣಿ ನಡೆಸಿದ್ದನ್ನು ಪ್ರಸ್ತಾಪಿಸಿದ ನಾರಾಯಣಸ್ವಾಮಿ, ಅನಿಲ್ ಬೈಜಾಲ್ ಅವರ ಹಸ್ತಕ್ಷೇಪ ಪ್ರಶ್ನಿಸಿ ಅವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.
ಪುದುಚೇರಿಯಲ್ಲೂ ಅದೇ ಪರಿಸ್ಥಿತಿ ಇದ್ದು, ಕೇಂದ್ರ ಆಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಚುನಾಯಿತ ಸರ್ಕಾರವನ್ನು ಕಡೆಗಣಿಸಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ.
ಈಗ ಕೇಂದ್ರ ಆಡಳಿತ ಪ್ರದೇಶಗಳಿಗೆ ರಾಜ್ಯದ ಸ್ಥಾನಮಾನ ಹಾಗೂ ವಿಶೇಷ ಅಧಿಕಾರಿ ನೀಡುವ ಸಮಯ ಬಂದಿದೆ ಎಂದು ನಾರಾಯಣಸ್ವಾಮಿ ಅವರು ಹೇಳಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಪುದುಚೇರಿಗೆ ಪೂರ್ಣ ರಾಜ್ಯದ ಸ್ಥಾನಮಾನಕ್ಕಾಗಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!