ಸಾಂದರ್ಭಿಕ ಚಿತ್ರ 
ದೇಶ

ದೇಶ ತೀವ್ರ ನೀರಿನ ಬಿಕ್ಕಟ್ಟು ಎದುರಿಸುತ್ತಿದೆ: ನೀತಿ ಆಯೋಗ ವರದಿ

ಶುದ್ದ ಕುಡಿಯುವ ನೀರು ಸಿಗದೆ ಪ್ರತಿವರ್ಷ 2 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. 60 ಕೋಟಿ ಜನರು ನೀರಿನ ಬವಣೆಯಿಂದ ಬಳಲುತ್ತಿದ್ದು, ದೇಶ ಕೆಟ್ಟ ನೀರಿನ ಬಿಕ್ಕಟ್ಟು ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ನೀತಿ ಆಯೋಗದ ವರದಿ ತಿಳಿಸಿದೆ.

ನವದೆಹಲಿ: ಶುದ್ದ ಕುಡಿಯುವ  ನೀರು  ಸಿಗದೆ ಪ್ರತಿವರ್ಷ 2 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. 60 ಕೋಟಿ ಜನರು  ನೀರಿನ ಬವಣೆಯಿಂದ ಬಳಲುತ್ತಿದ್ದು, ದೇಶ ಕೆಟ್ಟ ನೀರಿನ ಬಿಕ್ಕಟ್ಟು ಸಮಸ್ಯೆಯನ್ನು  ಎದುರಿಸುತ್ತಿದೆ ಎಂದು  ನೀತಿ ಆಯೋಗದ ವರದಿ ತಿಳಿಸಿದೆ.

ಸಂಯೋಜಿತ ನೀರು ನಿರ್ವಹಣಾ ಸೂಚ್ಯಂಕ ಹೆಸರಿನಲ್ಲಿ ವರದಿಯನ್ನು ಇಂದು ಬಿಡುಗಡೆ ಮಾಡಿದ  ಕೇಂದ್ರ   ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ,ಬಿಕ್ಕಟ್ಟು ಮಾತ್ರ ಕೆಟ್ಟದಾಗಿ ಹೋಗಲಿದೆ ಎಂದು ಹೇಳಿದರು.

"2030 ರ ಹೊತ್ತಿಗೆ ದೇಶದಲ್ಲಿ  ನೀರಿನ ಬೇಡಿಕೆ ಎರಡು ಬಾರಿ ಪೂರೈಕೆ ಮಾಡುವಷ್ಟು ಲಭ್ಯವಿರುವುದಾಗಿ  ಊಹಿಸಲಾಗಿದ್ದು,  ನೂರಾರು ದಶಲಕ್ಷ ಜನರಿಗೆ ತೀವ್ರವಾದ ನೀರಿನ ಕೊರತೆ ಎದುರಾಗಲಿದೆ. ಜಿಡಿಪಿಯಲ್ಲಿ ಶೇ.6 ರಷ್ಟ ಕೊರತೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸ್ವತಂತ್ರ ಏಜೆನ್ಸಿಗಳ ಮಾಹಿತಿಯಂತೆ  ಶೇ. 70 ರಷ್ಟು ನೀರು ಕಲುಷಿತವಾಗಿದ್ದು, ನೀರಿನ ಗುಣಮಟ್ಟದ ಸೂಚ್ಯಂಕದಲ್ಲಿನ 122 ರಾಷ್ಟ್ರಗಳ ಪೈಕಿ ಭಾರತ 120 ನೇ ಸ್ಥಾನದಲ್ಲಿದೆ .

ಪ್ರಸಕ್ತ, 600 ಮಿಲಿಯನ್ ಭಾರತೀಯರು ತೀವ್ರ  ನೀರಿನ ಬವಣೆ ಎದುರಿಸುತ್ತಿದ್ದಾರೆ . ಅಲ್ಲದೇ ಸುರಕ್ಷಿತವಾಗಿ ನೀರಿನ ಲಭ್ಯತೆ ಇಲ್ಲದಿರುವುದರಿಂದ ಪ್ರತಿ ವರ್ಷ ಸುಮಾರು ಎರಡು ಲಕ್ಷ ಜನರು ಸಾವನ್ನಪ್ಪುತ್ತಾರೆ" ಎಂದು  ನೀತಿ ಆಯೋಗದ ವರದಿಯಲ್ಲಿ ಹೇಳಲಾಗಿದ್ದು. ನೀರಿನ ಸಂಪನ್ಮೂಲಗಳು ಮತ್ತು ಬಳಕೆ ಬಗ್ಗೆ ಅರಿವು ಮೂಡಿಸಬೇಕಾಗದ ಅಗತ್ಯವಿದೆ ಎಂದು ಒತ್ತಿ ಹೇಳಿದೆ.

ಡಾಲ್ಬರ್ಗ್ ಅನಾಲಿಸಿಸ್, ಎಫ್ಎಒ ಮತ್ತು ಯುನಿಸೆಪ್ ನಂತರ ಸಂಸ್ಥೆಗಳ ಅಂಕಿಅಂಶಗಳ ಪ್ರಕಾರ   2030 ರ ಹೊತ್ತಿಗೆ 2030 ರೊಳಗೆ 40 ರಷ್ಟು ಜನರಿಗೆ ಕುಡಿಯುವ ನೀರನ್ನು  ಪೂರೈಕೆ ಮಾಡುವುದು ಕಷ್ಟಸಾಧ್ಯವಾಗಲಿದೆ.
  2020 ರ ಹೊತ್ತಿಗೆ ದೆಹಲಿ, ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ 21 ನಗರಗಳಲ್ಲಿ ಅಂತರ್ಜಲ ಸಮಸ್ಯೆ ಕಾಡಲಿದ್ದು, 100 ದಶಲಕ್ಷ ಜನರು ತೀವ್ರ ರೀತಿಯ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT