ಶುಜಾತ್ ಬುಖಾರಿ ಹತ್ಯೆ: 4 ನೇ ಆರೋಪಿಯ ಫೋಟೋ ಬಹಿರಂಗ, ತನಿಖೆಗಾಗಿ ಎಸ್ಐಟಿ ರಚನೆ 
ದೇಶ

ಪತ್ರಕರ್ತ ಬುಖಾರಿ ಹತ್ಯೆ: 4ನೇ ಆರೋಪಿಯ ಫೋಟೋ ಬಿಡುಗಡೆ, ತನಿಖೆಗಾಗಿ ಎಸ್ಐಟಿ ರಚನೆ

'ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹತ್ಯೆಯ 4 ನೇ ಆರೋಪಿಯ ಫೋಟೊವನ್ನು ಜಮ್ಮು-ಕಾಶ್ಮೀರ ಪೊಲೀಸರು ಬಹಿರಂಗಗೊಳಿಸಿದ್ದಾರೆ.

ಶ್ರೀನಗರ: 'ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹತ್ಯೆಯ 4 ನೇ ಆರೋಪಿಯ ಫೋಟೊವನ್ನು ಜಮ್ಮು-ಕಾಶ್ಮೀರ ಪೊಲೀಸರು ಬಹಿರಂಗಗೊಳಿಸಿದ್ದಾರೆ. 
ಪೊಲೀಸರು ಬಹಿರಂಗಪಡಿಸಿರುವ ಫೋಟೊದಲ್ಲಿ ವ್ಯಕ್ತಿಯ ಫೋಟೋ ಸ್ಪಷ್ಟವಾಗಿ ಕಾಣುತ್ತಿದ್ದು, ಆತನನ್ನು ಗುರುತಿಸಿ ಬಂಧಿಸಲು ಸಾರ್ವಜನಿಕರಿಂದ ಪೊಲೀಸರು ನೆರವು ಕೋರಿದ್ದಾರೆ.  ಬುಖಾರಿ ಮೇಲೆ ಗುಂಡಿನ ದಾಳಿ ನಡೆದಾಗ ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಫೋಟೊ ಸಿಕ್ಕಿದ್ದು, ಗುಂಡಿನ ದಾಳಿ ನಡೆಸಿದ ಬಳಿಕ ಕಾರಿನಲ್ಲಿದ್ದ ಭದ್ರತಾ ಸಿಬ್ಬಂದಿಯ ಬಳಿ ತಡಕಾಡುತ್ತಿದ್ದದ್ದೂ ವಿಡಿಯೋದಲ್ಲಿ ಸೆರೆಯಾಗಿದೆ. 
ವಿಡಿಯೋದಲ್ಲಿ ದಾಖಲಾಗಿರುವ ವ್ಯಕ್ತಿ ಬುಖಾರಿ ಕಾರಿನಲ್ಲಿ ಬಿದ್ದಿದ್ದ ಭದ್ರತಾ ಸಿಬ್ಬಂದಿಗಳ ಪಿಸ್ತೂಲ್ ನ್ನು ಪೊಲೀಸ್ ಸಿಬ್ಬಂದಿಗಳ ಎದುರೇ ಕೊಂಡೊಯ್ದ ಘಟನೆಯೂ ದೃಶ್ಯದಲ್ಲಿ ಸೆರೆಯಾಗಿದೆ.  ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಜೂ.14 ರಂದು ರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಶಂಕಿತರ ಎರಡು ಚಿತ್ರಗಳನ್ನು ಪ್ರಕಟಿಸಿದ್ದರು. ಆದರೆ ಅವರ ಮುಖ ಸ್ಪಷ್ಟವಾಗಿ ಗೋಚರಿಸುತ್ತಿರಲಿಲ್ಲ. 
ಬೈಕ್ ಚಾಲನೆ ಮಾಡುತ್ತಿದ್ದ ಓರ್ವ ವ್ಯಕ್ತಿ ಹೆಲ್ಮೆಟ್ ಹಾಕಿದ್ದರೆ, ಹಿಂಬದಿ ಕುಳಿತಿದ್ದ ಮತ್ತೋರ್ವ ತನ್ನ ಮುಖವನ್ನು ಮುಚ್ಚಿಕೊಂಡಿದ್ದ. ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಮಧ್ಯದಲ್ಲಿ ಕುಳಿತಿದ್ದ ವ್ಯಕ್ತಿಯ ಮುಖ ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ. ಫೋಟೋದಲ್ಲಿರುವ ವ್ಯಕ್ತಿಯ ಸುಳಿವು ಸಿಕ್ಕರೆ ಕೊಥಿಬಾಗ್ ಪೊಲೀಸ್ ಠಾಣೆಯ 9596770623 ಈ ಸಂಖ್ಯೆ ಅಥವಾ ಶ್ರೀನಗರದ ಪಿಸಿಆರ್ 9596222550, 9596222551, 01942477568 ನ್ನು ಸಂಪರ್ಕಿಸಿ ವಿವರ ನೀಡಬಹುದಾಗಿದೆ. ಒಂದು ದಶಕದಲ್ಲಿ ಉಗ್ರರ ಗುಂಡೇಟಿಕಿಗೆ ಬಲಿಯಾಗಿರುವ 3 ನೇ ಪತ್ರಕರ್ತ ಬುಖಾರಿ ಆಗಿದ್ದು, ಪ್ರಕರಣದ ತನಿಖೆಗಾಗಿ ಡಿಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್ ಐಟಿಯನ್ನು ರಚಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT