ಹಿಂದೂಗಳನ್ನು ಪ್ರೀತಿಸುವುದೆಂದರೆ ಮುಸ್ಲಿಮರನ್ನು ದ್ವೇಷಿಸುವುದೇ?: ಮಮತಾ 
ದೇಶ

ಹಿಂದೂಗಳನ್ನು ಪ್ರೀತಿಸುವುದೆಂದರೆ ಮುಸ್ಲಿಮರನ್ನು ದ್ವೇಷಿಸುವುದೇ?: ಮಮತಾ

ತಮ್ಮ ವಿರುದ್ಧ ಅತಿಯಾದ ಮುಸ್ಲಿಂ ತುಷ್ಟೀಕರಣ ಆರೋಪ ಮಾಡುತ್ತಿರುವವರು ಹಿಂದೂಗಳಿಗೂ ಸ್ನೇಹಿತರಲ್ಲ, ಮುಸ್ಲಿಮರಿಗೂ ಸ್ನೇಹಿತರಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು

ಕೋಲ್ಕತ್ತಾ: ತಮ್ಮ ವಿರುದ್ಧ ಅತಿಯಾದ ಮುಸ್ಲಿಂ ತುಷ್ಟೀಕರಣ ಆರೋಪ ಮಾಡುತ್ತಿರುವವರು ಹಿಂದೂಗಳಿಗೂ ಸ್ನೇಹಿತರಲ್ಲ, ಮುಸ್ಲಿಮರಿಗೂ ಸ್ನೇಹಿತರಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. 
ಕೆಲವರು ನನ್ನ ವಿರುದ್ಧ ಮುಸ್ಲಿಂ ತುಷ್ಟೀಕರಣ ಮಾಡುತ್ತಿರುವ ಆರೋಪ ಮಾಡುತ್ತಾರೆ. ಹಿಂದೂಗಳನ್ನು ಪ್ರೀತಿಸುವುದೆಂದರೆ ಮುಸ್ಲಿಮರನ್ನು ದ್ವೇಷಿಸಬೇಕೆ ಎಂದು ಅವರನ್ನು ಕೇಳುತ್ತೇನೆ, ನಾನು ಎಲ್ಲಾ ಧರ್ಮ, ಸಮುದಾಯಗಳನ್ನೂ ಪ್ರೀತಿಸುತ್ತೇನೆ, ಈ ದೇಶ ಎಲ್ಲರಿಗೂ ಸೇರಿದ್ದು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಕೋಲ್ಕತ್ತಾದಲ್ಲಿ ರಂಜಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, ನನ್ನ ವಿರುದ್ಧ ಮುಸ್ಲಿಂ ತುಷ್ಟೀಕರಣದ ಆರೋಪ ಮಾಡುತ್ತಿರುವವರು ಹಿಂದೂಗಳಿಗೂ ಸ್ನೇಹಿತರಲ್ಲ, ಮುಸ್ಲಿಮರಿಗೂ ಸ್ನೇಹಿತರಲ್ಲ ಎಂದಿದ್ದಾರೆ. ಇದೇ ವೇಳೆ ರಂಜಾನ್ ದಿನದಂದೇ ನಿಗದಿಯಾಗಿದ್ದ ನೀತಿ ಆಯೋಗದ ಸಭೆಯ ದಿನಾಂಕ  ತಮ್ಮ ಪ್ರತಿಭಟನೆಯಿಂದಲೇ ಮುಂದೂಡಿಕೆಯಾಗಿದೆ ಎಂದೂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT