ಕೇರಳ ಎಡಿಜಿಪಿ ಸುದೇಶ್ ಕುಮಾರ್ 
ದೇಶ

ಮಗಳಿಂದ ಪೊಲೀಸ್ ಕಚೇರಿಯ ಚಾಲಕನ ಮೇಲೆ ಹಲ್ಲೆ, ಎಡಿಜಿಪಿ ಹುದ್ದೆಯಿಂದ ಸುದೇಶ್ ಕುಮಾರ್ ಅಮಾನತು

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಮಗಳು ಕಚೇರಿಯ ಚಾಲಕನ ಮೇಲೆ ಹಲ್ಲೆ ನಡೆಸಿ, ಗಾಯಗೊಳಿಸಿದ್ದ ಆರೋಪದ ಮೇರೆಗೆ ಎಡಿಜಿಪಿ ಸ್ಥಾನದಿಂದ ಸುದೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ತಿರುವನಂತಪುರಂ: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಮಗಳು  ಕಚೇರಿಯ ಚಾಲಕನ ಮೇಲೆ ಹಲ್ಲೆ ನಡೆಸಿ, ಗಾಯಗೊಳಿಸಿದ್ದ ಆರೋಪದ ಮೇರೆಗೆ ಎಡಿಜಿಪಿ ಸ್ಥಾನದಿಂದ  ಸುದೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಪೊಲೀಸ್ ಡ್ರೈವರ್ ಗಾವಸ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಹೆಂಡತಿ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ನೇರವಾಗಿ ಭೇಟಿ ಮಾಡಿ ಅಧಿಕಾರಿಯ ವಿರುದ್ಧ ದೂರು ದಾಖಲಿಸಿದ್ದರು.
ಈ ಸಂಬಂಧ ಮುಖ್ಯಮಂತ್ರಿಗಳು ದಕ್ಷಿಣ ವಲಯ ಎಡಿಜಿಪಿ ಅನಿಲ್ ಕುಮಾರ್ ಅವರಿಂದ ಮಾಹಿತಿ ಸಂಗ್ರಹಿಸಿದ್ದು,  ಸೂಕ್ತ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಸುದೇಶ್ ಕುಮಾರ್  ಆರ್ಡಲಿಯಲ್ಲಿ  ಪೊಲೀಸರನ್ನು ತನ್ನ ಮನೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದ ದೂರು ಕೇಳಿಬಂದಿದೆ.  ಇನ್ನಿತರ ಸರ್ಕಾರದ ಇಲಾಖೆಯಲ್ಲಿ ಅವರಿಗೆ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಪೊಲೀಸರ ಹೊರಗಿನ ಮಾಹಿತಿಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT