ದೇಶ

ಮಗಳಿಂದ ಪೊಲೀಸ್ ಕಚೇರಿಯ ಚಾಲಕನ ಮೇಲೆ ಹಲ್ಲೆ, ಎಡಿಜಿಪಿ ಹುದ್ದೆಯಿಂದ ಸುದೇಶ್ ಕುಮಾರ್ ಅಮಾನತು

Nagaraja AB
ತಿರುವನಂತಪುರಂ: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಮಗಳು  ಕಚೇರಿಯ ಚಾಲಕನ ಮೇಲೆ ಹಲ್ಲೆ ನಡೆಸಿ, ಗಾಯಗೊಳಿಸಿದ್ದ ಆರೋಪದ ಮೇರೆಗೆ ಎಡಿಜಿಪಿ ಸ್ಥಾನದಿಂದ  ಸುದೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಪೊಲೀಸ್ ಡ್ರೈವರ್ ಗಾವಸ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಹೆಂಡತಿ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ನೇರವಾಗಿ ಭೇಟಿ ಮಾಡಿ ಅಧಿಕಾರಿಯ ವಿರುದ್ಧ ದೂರು ದಾಖಲಿಸಿದ್ದರು.
ಈ ಸಂಬಂಧ ಮುಖ್ಯಮಂತ್ರಿಗಳು ದಕ್ಷಿಣ ವಲಯ ಎಡಿಜಿಪಿ ಅನಿಲ್ ಕುಮಾರ್ ಅವರಿಂದ ಮಾಹಿತಿ ಸಂಗ್ರಹಿಸಿದ್ದು,  ಸೂಕ್ತ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಸುದೇಶ್ ಕುಮಾರ್  ಆರ್ಡಲಿಯಲ್ಲಿ  ಪೊಲೀಸರನ್ನು ತನ್ನ ಮನೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದ ದೂರು ಕೇಳಿಬಂದಿದೆ.  ಇನ್ನಿತರ ಸರ್ಕಾರದ ಇಲಾಖೆಯಲ್ಲಿ ಅವರಿಗೆ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಪೊಲೀಸರ ಹೊರಗಿನ ಮಾಹಿತಿಗಳು ತಿಳಿಸಿವೆ.
SCROLL FOR NEXT