ಸುಬ್ರಹ್ಮಣ್ಯನ್​ ಸ್ವಾಮಿ 
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ನಕ್ಸಲೈಟ್ ಇದ್ದಂತೆ, ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದ್ದೇಕೆ?: ಸುಬ್ರಹ್ಮಣ್ಯನ್​ ಸ್ವಾಮಿ ಪ್ರಶ್ನೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಓರ್ವ ನಕ್ಸಲ್ ಇದ್ದಂತೆ, ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ.....

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಓರ್ವ ನಕ್ಸಲ್ ಇದ್ದಂತೆ, ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ನಾನಾ ರಾಜ್ಜ್ಯಗಳ ಮುಖ್ಯಂತ್ರಿಗಳು ಬೆಂಬಲ ನೀಡಿದ್ದೇಕೆ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಸುಬ್ರಹ್ಮಣ್ಯನ್​ ಸ್ವಾಮಿ ಪ್ರಶ್ನಿಸಿದ್ದಾರೆ.
ಎಎನ್​ಐ ಸುದ್ದಿಸಂಸ್ಥೆ ಜತೆ ಮಾತನಾಡಿರುವ ಸುಬ್ರಹ್ಮಣ್ಯನ್ ಸ್ವಾಮಿ ದೆಹಲಿಯಲ್ಲಿ ಐಎಎಸ್ಅಧಿಕಾರಿಗಳ ಮುಷ್ಕರ ನಿಲ್ಲಿಸಲು ಆದೇಶಿಸಬೇಕೆಂದು ಲೆಫ್ಟಿನೆಂಟ್​ ಗವರ್ನರ್ ಕಛೇರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅರವಿಂದ ಕೇಜ್ರಿವಾಲ್ ಬಗ್ಗೆ ಕಿಡಿ ಕಾರಿದ್ದಾರೆ/
ಕೇಜ್ರಿವಾಲ್ ನಕ್ಸಲೈಟ್​ ಇದ್ದಂತೆ. ಎಂದ ಅವರು ಎಚ್​.ಡಿ ಕುಮಾರಸ್ವಾಮಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರ ಸಿಎಂ ಚಂದ್ರ ಬಾಬು ನಾಯ್ಡು, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಬೆಂಬಲ ನೀಡಿದ್ದೇಕೆ? ಎಂದು ಕೇಳಿದ್ದಾರೆ.
ದೆಹಲಿಯಲ್ಲಿ ಕಳೆದ ಮೂರು ತಿಂಗಳಿಂದ ಐಎಎಸ್​ ಅಧಿಕಾರಿಗಳು ಮುಷ್ಕರ ನಾಡೆಸಿದ್ದು ಇದನ್ನು ನಿಲ್ಲಿಸಲು ಲೆ. ಗವರ್ನರ್ ಆದೇಶಿಸಬೇಕು, ಮನೆ ಬಾಗಿಲಿಗೆ ಪಡಿತರ ವಿತರಣೆಗೆ ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆ ಸೇರಿ ಅಹಲವು ಬೇಡಿಕೆಗಳನ್ನಿಟ್ಟು ಕಳೆದ ಆರು ದಿನಗಳಿಂದಲೂ ಲೆ. ಗವರ್ನರ್ ಕಛೇರಿಯಲ್ಲಿ ಧರಣಿ ನಡೆಸಿದ್ದಾರೆ.
ಶನಿವಾರದಂದು ಸಹ ಧರಣಿ ಮುಂದುವರಿಸಿದ್ದ ಕೇಜ್ರಿವಾಲ್ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿ ಬಿಜೆಪಿ ಹೊರತಾದ ರಾಜ್ಯಗಳ ಮುಖ್ಯಂತ್ರಿಗಳು ಭೇಟಿಯಾಗಿ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT