ನೀತಿ ಆಯೋಗ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 
ದೇಶ

ರೈತರ ಸಾಲಮನ್ನಾಗೆ ಶೇ.50ರಷ್ಟು ಕೇಂದ್ರ ಸರ್ಕಾರ ನೆರವು ನೀಡಲಿ: ಹೆಚ್ ಡಿ ಕುಮಾರಸ್ವಾಮಿ

ಕರ್ನಾಟಕದಲ್ಲಿ ಸುಮಾರು 85 ಲಕ್ಷ ಮಂದಿ ರೈತರು ವಿವಿಧ ಬ್ಯಾಂಕುಗಳಲ್ಲಿ ಕೃಷಿ ಸಾಲ ತೆಗೆದುಕೊಂಡಿದ್ದಾರೆ. ಆದರೆ ಸತತ ಬರಗಾಲ, ಬೆಳೆನಾಶಗಳಿಂದಾಗಿ ಸಾಕಷ್ಟು ಇಳುವರಿ ....

ನವದೆಹಲಿ: ಕರ್ನಾಟಕದಲ್ಲಿ ಸುಮಾರು 85 ಲಕ್ಷ ಮಂದಿ ರೈತರು ವಿವಿಧ ಬ್ಯಾಂಕುಗಳಲ್ಲಿ ಕೃಷಿ ಸಾಲ ತೆಗೆದುಕೊಂಡಿದ್ದಾರೆ. ಆದರೆ ಸತತ ಬರಗಾಲ, ಬೆಳೆನಾಶಗಳಿಂದಾಗಿ ಸಾಕಷ್ಟು ಇಳುವರಿ ಬಾರದೆ ಕಂಗಾಲಾಗಿ ಹೋಗಿರುವ ರೈತರು ಸಾಲವನ್ನು ಹಿಂತಿರುಗಿಸಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರ ಸಾಲ ಮನ್ನಾದ ಶೇಕಡಾ 50ರಷ್ಟು ಭಾಗವನ್ನು ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಅವರು ಇಂದು ದೆಹಲಿಯಲ್ಲಿ ನೀತಿ ಆಯೋಗ ಮಂಡಳಿಯ ನಾಲ್ಕನೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಇಂದು ರೈತರ ಸಾಲದ ಸುಳಿಯಲ್ಲಿ ಸಿಲುಕಿ ಹೋಗಿದ್ದಾರೆ. ನೂತನ ಸಮ್ಮಿಶ್ರ ಸರ್ಕಾರ ಇವರ ಸಮಸ್ಯೆಗೆ ಸ್ಪಂದಿಸಲು ಸಿದ್ದವಿದ್ದು ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ಹೇಳಿದರು.

ಕೃಷಿ ಮಾರುಕಟ್ಟೆ ಸುಧಾರಣೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಕರ್ನಾಟಕ ಕೃಷಿ ಮಾರುಕಟ್ಟೆ ನೀತಿ 2013 ಹಲವು ಸುಧಾರಣೆಗಳನ್ನು ತಂದಿದೆ. ಸಮಾನ ಮಾರುಕಟ್ಟೆ ವೇದಿಕೆ (ಯುಪಿಎಮ್) ರೈತರಿಗೆ ಬಹಳ ಉಪಕಾರಿಯಾಗಿದ್ದು ರೈತರ ಬೆಳೆಗಳಿಗೆ ಸ್ಪರ್ಧಾತ್ಮಕ ಬೆಲೆ ನಿಗದಿಪಡಿಸಲಾಗುತ್ತದೆ ಎಂದರು,

ತಮ್ಮ ಭಾಷಣಲ್ಲಿ ಮುಖ್ಯಮಂತ್ರಿ, ಹವಾಮಾನ ಚೇತರಿಕೆ ಕೃಷಿ ಬಗ್ಗೆ ಪ್ರಸ್ತಾಪಿಸಿದರು. ಕೃಷಿ ವಲಯದಲ್ಲಿ ಹವಾಮಾನ ಬದಲಾವಣೆ ಮುಖ್ಯವಾಗುತ್ತದೆ. ದೇಶದಲ್ಲಿ ಹವಾಮಾನ ಚೇತರಿಕೆ ಕೃಷಿ ಕ್ರಾಂತಿಯನ್ನು ತರಲು ತಜ್ಞರ ನೆರವು ಪಡೆದು ವಿಸ್ತಾರ ಚೌಕಟ್ಟು ಮತ್ತು ಪದ್ದತಿಯನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.

ಇಂದು ಕೃಷಿ ಸೇರಿದಂತೆ ಬೇರೆ ವಲಯಗಳಲ್ಲಿ ನೀರಿನ ಅಭಾವ ಉಂಟಾಗುತ್ತಿದ್ದು ಅದನ್ನು ಬಗೆಹರಿಸಲು ಕರ್ನಾಟಕ ಸರ್ಕಾರ ಕೆರೆ ಸಂಜೀವಿನಿಯಂತಹ ಕ್ರಮಗಳನ್ನು ಅನುಸರಿಸಿದೆ. ಒಂದು ದಶಕವನ್ನಿಡೀ ನೀರಿನ ಸಂರಕ್ಷಣೆಗೆ ಬಳಸಬೇಕು. ಅದನ್ನು ನೀರಿನ ದಶಕ ಎಂದು ಕರೆಯೋಣ. ಅದು ಜನತೆಯ ಚಳವಳಿಯಾಗಿ ಮಾರ್ಪಡಬೇಕು. ಇದಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು.

ಆರೋಗ್ಯ ವಲಯ ಸೇರಿದಂತೆ ನಗರಾಭಿವೃದ್ಧಿ ಕುರಿತು ಸಹ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್