ಯೋಧ ಔರಂಗಜೇಬ್ ನ ಹತ್ಯೆ ಹಿಂದೆ ಪಾಕ್ ನ ಐಎಸ್ಐ ಕೈವಾಡ? 
ದೇಶ

ಯೋಧ ಔರಂಗಜೇಬ್ ನ ಹತ್ಯೆ ಹಿಂದೆ ಪಾಕ್ ನ ಐಎಸ್ಐ ಕೈವಾಡ?

ಯೋಧ ಔರಂಗಜೇಬ್ ನ ಹತ್ಯೆ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡವಿದೆ ಎಂದು ಗುಪ್ತಚರ ಇಲಾಖೆ ಅನುಮಾನ ವ್ಯಕ್ತಪಡಿಸಿದೆ.

ನವದೆಹಲಿ: ಯೋಧ ಔರಂಗಜೇಬ್ ನ ಹತ್ಯೆ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡವಿದೆ ಎಂದು ಗುಪ್ತಚರ ಇಲಾಖೆ ಅನುಮಾನ ವ್ಯಕ್ತಪಡಿಸಿದೆ. 
ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಔರಂಗಜೇಬ್ ನ್ನು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಹತ್ಯೆ ಮಾಡಲಾಗಿತ್ತು. ಔರಂಗಜೇಬ್ ಹತ್ಯೆಯಲ್ಲಿ ಪಾಕಿಸ್ತಾನದ ಐಎಸ್ಐ, ಪಾಕ್ ನ ಉಗ್ರ ಸಂಘಟನೆಗಳಾದ ಲಷ್ಕರ್-ಎ-ತಯ್ಬಾ(ಎಲ್ ಇಟಿ) ಜೈಶ್-ಎ-ಮೊಹಮ್ಮದ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕೈವಾಡವಿರುವ ಸಾಧ್ಯತೆ ಇದ್ದು, ಘಟನೆಗೆ ಹೊಣೆ ಹೊರದಂತೆ ಐಎಸ್ಐ ಉಗ್ರ ಸಂಘಟನೆಗಳಿಗೆ ಸೂಚಿಸಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.
ಔರಂಗಜೇಬ್ ನ ಹತ್ಯೆಯ ನಂತರ ಐಎಸ್ಎಸ್ ಕಾಶ್ಮೀರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಔರಂಗಜೇಬ್ ಹತ್ಯೆಗೆ ಕಣಿವೆ ರಾಜ್ಯದಲ್ಲಿ ವ್ಯಕ್ತವಾಗುತ್ತಿರುವ ಆಕ್ರೋಶ ಹಾಗೂ ಭಾರತೀಯ ಸೇನೆಗೆ ವ್ಯಕ್ತವಾಗುತ್ತಿರುವ ಬೆಂಬಲ ಎರಡೂ ಪಾಕಿಸ್ತಾನದ ಐಎಸ್ಐ ಗೆ ತಲೆನೋವಾಗಿ ಪರಿಣಮಿಸುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್