ನಾಲ್ವರು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ 
ದೇಶ

ದೆಹಲಿ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಏನನ್ನೂ ಹೇಳಲಿಲ್ಲ- ಮಮತಾ

ದೆಹಲಿಯಲ್ಲಿನ ರಾಜಕೀಯ ಬೆಳವಣಿಗೆ ಕುರಿತು ಪ್ರಧಾನಮಂತ್ರಿ ಏನನ್ನೂ ಹೇಳಲಿಲ್ಲ. ಯಾವುದೇ ರೀತಿಯ ಭರವಸೆ ನೀಡಲಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ರಾಜಕೀಯ ಬೆಳವಣಿಗೆ ಕುರಿತು ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಬಳಿ  ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದಾಗ ಮೋದಿ ಅವರು ಏನನ್ನೂ ಹೇಳಲಿಲ್ಲ. ಯಾವುದೇ ರೀತಿಯ ಭರವಸೆ ನೀಡಲಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ನೀತಿ ಆಯೋಗದ ಆಡಳಿತ ಮಂಡಳಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ,  ತಮ್ಮನ್ನು ಸೇರಿದಂತೆ  ನಾಲ್ವರು ರಾಜ್ಯಗಳ ಮುಖ್ಯಮಂತ್ರಿಗಳು  ಪ್ರಧಾನಿ ನರೇಂದ್ರಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ದೆಹಲಿ ಬಿಕ್ಕಟ್ಟು ಬಗೆಹರಿಸುವಂತೆ ಮನವಿ ಮಾಡಿಕೊಂಡೆವು ಎಂದು ತಿಳಿಸಿದರು.
ಕಾಲಮಿತಿಯಲ್ಲಿ ಸಮಸ್ಯೆ  ಪರಿಹಾರದ ಬಗ್ಗೆ ಜನತೆಗೆ ಭರವಸೆ ನೀಡಿ ಎಂದು ಕೇಳಿಕೊಂಡೆವು. ಆದರೆ, ಪ್ರಧಾನಿ ಏನನ್ನೂ ಹೇಳಲಿಲ್ಲ.  ಗೃಹ ಸಚಿವರು ಮಾತ್ರ ಈ ವಿಚಾರದ ಬಗ್ಗೆ ಗಮನ ಹರಿಸುವುದಾಗಿ ಹೇಳಿದರು ಎಂದು  ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT