ಸಂಗ್ರಹ ಚಿತ್ರ 
ದೇಶ

2019 ಲೋಕಸಭಾ ಚುನಾವಣೆ: ಇನ್ನು ಪ್ರತೀ ತಿಂಗಳು 'ಮಹಾ ಮೈತ್ರಿ' ಒಗ್ಗಟ್ಟು ಪ್ರದರ್ಶನ

2019ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿಕೂಟ ಇನ್ನು ಮುಂದೆ ಪ್ರತೀ ತಿಂಗಳು ಒಗ್ಗಟ್ಟು ಪ್ರದರ್ಶನ ಮಾಡಲು ನಿರ್ಧರಿಸಿದೆ.

ನವದೆಹಲಿ: 2019ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿಕೂಟ ಇನ್ನು ಮುಂದೆ ಪ್ರತೀ ತಿಂಗಳು ಒಗ್ಗಟ್ಟು ಪ್ರದರ್ಶನ ಮಾಡಲು ನಿರ್ಧರಿಸಿದೆ.
ಪ್ರಮುಖವಾಗಿ ಮುಂಬರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಘಡ 3 ರಾಜ್ಯಗಳ  ವಿಧಾನಸಭೆ ಚುನಾವಣೆಯಿಂದಲೇ ಈ ತಿಂಗಳಿಗೊಂದು ಮಹಾಸಮಾವೇಶ ಮಾಡಲು ಮಹಾಮೈತ್ರಿಕೂಟ ನಿರ್ಧರಿಸಿದೆ.

ಕಳೆದವಾರವಷ್ಟೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬೆನ್ನಿಗೆ ನಿಂತಿದ್ದ ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳೂ ಕೂಡ ಈ ಮಹಾಮೈತ್ರಿಕೂಟದ ಸಮಾವೇಶದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿದುಬಂದಿದೆ. 

ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಯೋಜಿಸಿದ್ದ ಇಫ್ತಾರ್ ಕೂಟದ ವೇಳೆ ಮಹಾಮೈತ್ರಿಕೂಟದ ಬಹುತೇಕ ಎಲ್ಲ ನಾಯಕರೂ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲೇ 2019ರ ಲೋಕಸಭಾ ಚುನಾವಣೆಗಾಗಿ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಾಗಿತ್ತು. ಅದರಂತೆ ಇದೀಗ ಪ್ರತೀ ತಿಂಗಳಿಗೊಂದರಂತೆ ಮಹಾಸಮಾವೇಶ ಆಯೋಜಿಸಲು ಮೈತ್ರಿ ಕೂಟ ಮುಂದಾಗಿದೆ.

ತಾಜ್ ಪ್ಯಾಲೆಸ್ ನಲ್ಲಿ ಇಫ್ತಾರ್ ಪಾರ್ಟಿ ಬಳಿಕ ಎಸ್ ಪಿ ಮುಖಂಡ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಲಖನೌನಲ್ಲಿ ಮಹಾಮೈತ್ರಿಕೂಟದ ಒಗ್ಗಟ್ಟು ಪ್ರದರ್ಶನವಾಗಲಿದೆ. ಈ ಕಾರ್ಯಕ್ರಮಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸೇರಿದಂತೆ ಮಹಾಮೈತ್ರಿಕೂಟದ ಬಹುತೇಕ ನಾಯಕರು ಆಗಮಿಸಲಿದ್ದಾರೆ. ಇದಲ್ಲದೆ ವಿಪಕ್ಷಗಳ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೂ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದಲ್ಲದೆ ಬಿಹಾರದ ಜೆಡಿಯು ಪಕ್ಷದ ರೆಬೆಲ್ ಮುಖಂಡ ಶರದ್ ಯಾದವ್ ಕೂಡ ಪಾಲ್ಗೊಳ್ಳಲ್ಲಿದ್ದಾರೆ.

ಕಳೆದವಾರವಷ್ಟೇ ಬಿಜೆಪಿಯೇತರ ಮುಖ್ಯಮಂತ್ರಿಗಳು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಬೆಂಬಲ ನೀಡಿದ್ದು ಮಾತ್ರವಲ್ಲದೇ ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದರು. ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಕರ್ನಾಟಕ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌; ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ, ಸಿದ್ಧತೆ ಆರಂಭ: CM ಸಿದ್ದರಾಮಯ್ಯ

ರಾಹುಲ್ ಗಾಂಧಿ ಪ್ರಭು ಶ್ರೀರಾಮನಿದ್ದಂತೆ: ಶೋಷಿತರಿಗೆ ನ್ಯಾಯ ಒದಗಿಸುತ್ತಿದ್ದಾರೆ - ನಾನಾ ಪಟೋಲೆ

ಕೋಗಿಲು ತೆರವು: ಕೇವಲ 90 ಜನರಿಗೆ ಮಾತ್ರ ಮನೆ ಹಂಚಿಕೆ - ಸಚಿವ ಭೈರತಿ ಸುರೇಶ್

ಬಾಂಗ್ಲಾದೇಶದಲ್ಲಿ ಜೈಶಂಕರ್ ಹ್ಯಾಂಡ್ ಶೇಕ್: ಪಾಕ್ ವರದಿಗಳು ದೊಡ್ಡ "ಜೋಕ್" ಎಂದ ಮಾಜಿ ರಾಯಭಾರಿ!

SCROLL FOR NEXT