ಹೆಬ್ಬಾವು 
ದೇಶ

ಗ್ರಾಮಸ್ಥರ ಸೆಲ್ಫಿ ಹುಚ್ಚಿಗೆ ಹೆಬ್ಬಾವಿನೊಂದಿಗೆ ಜೀವದ ಜತೆಗೆ ಹೋರಾಡಿದ ಅರಣ್ಯಾಧಿಕಾರಿ!

ಹೆಬ್ಬಾವಿನ ರಕ್ಷಣೆ ನಂತರ ಹಾವಿನೊಂದಿಗೆ ಗ್ರಾಮಸ್ಥರು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದಿದ್ದರಿಂದ ಅರಣ್ಯಾಧಿಕಾರಿಯೊಬ್ಬರು ತಮ್ಮ ಜೀವವನ್ನೇ ಪಣಕ್ಕೀಡಬೇಕಾಗಿ ಬಂದಿತ್ತು...

ಜಲ್ಪೈಗುರಿ(ಪಶ್ಚಿಮಬಂಗಾಳ): ಹೆಬ್ಬಾವಿನ ರಕ್ಷಣೆ ನಂತರ ಹಾವಿನೊಂದಿಗೆ ಗ್ರಾಮಸ್ಥರು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದಿದ್ದರಿಂದ ಅರಣ್ಯಾಧಿಕಾರಿಯೊಬ್ಬರು ತಮ್ಮ ಜೀವವನ್ನೇ ಪಣಕ್ಕೀಡಬೇಕಾಗಿ ಬಂದಿತ್ತು. 
ಹೌದು ಜಲ್ಪೈಗುರಿಯ ಬೈಕುಂತಾಪುರ ಅರಣ್ಯದಲ್ಲಿ ಹೆಬ್ಬಾವನ್ನು ರಕ್ಷಣೆ ಮಾಡಲಾಗಿತ್ತು. ಈ ಅರಣ್ಯಾಧಿಕಾರಿ ಸಂಜಯ್ ದತ್ ಎಂಬುವರು ಹೆಬ್ಬಾವನ್ನು ಹೆಗಲ ಮೇಲೆ ಹಾಕಿಕೊಂಡು ಬರುತ್ತಿರುವಾಗ ಗ್ರಾಮಸ್ಥರು ಹೆಬ್ಬಾವಿನೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಮುಂದಾದರು. 
ಹೆಚ್ಚು ಜನರನ್ನು ಕಂಡಿದ್ದರಿಂದ ಹೆಬ್ಬಾವು ಸ್ವಲ್ಪ ಗಲಿಬಿಲಿಗೊಂಡು ಹಿಡಿದುಕೊಂಡಿದ್ದ ಅರಣ್ಯಾಧಿಕಾರಿಯನ್ನು ಕಚ್ಚಲು ಮುಂದಾಯಿತು. ಇದರಿಂದಾಗಿ ಅರಣ್ಯಾಧಿಕಾರಿ ಸಹ ಕೊಂಚ ಆತಂಕಕ್ಕೆ ಸಿಲುಕಿದ್ದರು. 
ಇನ್ನು 2016ರಲ್ಲಿ ರಾಜಸ್ಥಾನದಲ್ಲಿ ಸಹ ಇದೇ ರೀತಿಯ ಘಟನೆ ನಡೆದಿತ್ತು. ರಕ್ಷಣೆ ಮಾಡಲಾಗಿದ್ದ ಹೆಬ್ಬಾವಿನ ಜತೆ ಸೆಲ್ಫಿ ತೆಗೆಸಿಕೊಳ್ಳಲು ಹೋಗಿ ಯುವನೊರ್ವ ಹಾವಿನಿಂದ ಕಚ್ಚಿಸಿಕೊಂಡಿದ್ದ ಆದರೆ ಪ್ರಾಣಾಪಾಯ ಸಂಭವಿಸಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT